23.6 C
ಪುತ್ತೂರು, ಬೆಳ್ತಂಗಡಿ
August 30, 2026
Uncategorized

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಕಾರ್ಯಕ್ರಮಕ್ಕೆ ಹಿರಿಯರಾದ ಪೂವಪ್ಪ ಶೆಟ್ಟಿ ಬಿಳಿಬೈಲು ಅವರು ಚಾಲನೆ ನೀಡಿದರು.

ಶ್ರಾವಣ ಮಾಸದಲ್ಲಿ ದೇವಸ್ಥಾನದಿಂದ ಗಣೇಶ ಚತುರ್ಥಿಯ ಪವಿತ್ರವಾದ ದಿನದ ಸಂದರ್ಭದಲ್ಲಿ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ಪೂಜೆಗಾಗಿ ಭತ್ತದ ತೆನೆಯನ್ನು (ಹೊಸತು) ಸಮರ್ಪಿಸುವ ಉದಾತ್ತ ಉದ್ದೇಶದಿಂದ ಈ ಕೃಷಿ ಕಾಯಕವನ್ನು ನಡೆಸಿಕೊಂಡು ಬರುತ್ತಿದ್ದಾರೆ.

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ದೇವಸ್ಥಾನದ ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾೃತ ಮಂಡಳಿ, ಭಜನಾ ಮಂಡಳಿ ಹಾಲಿ ಮತ್ತು ಮಾಜಿ ಪದಾಧಿಕಾರಿಗಳು, ಹಾಗೂ ಭಕ್ತರು ಉಪಸ್ಥಿತರಿದ್ದರು.
ಪ್ರತಿ ವರ್ಷವೂ ದೇವಸ್ಥಾನದ ಗದ್ದೆಗೆ ಬೇಕಾಗುವ ನೇಜಿಯನ್ನು ಭಕ್ತರಾದ ಉಮನಾಥ ಶೆಟ್ಟಿ ಕುಲ್ಲುಂಜ ಅವರು ತಯಾರಿಸಿ ಕೊಡುತ್ತಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya
error: Content is protected !!