26 C
ಪುತ್ತೂರು, ಬೆಳ್ತಂಗಡಿ
May 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

ಪುತ್ತೂರು: ಬೆಳ್ತಂಗಡಿಯ ತೆಕ್ಕಾರು ನಿವಾಸಿಯಾಗಿದ್ದು ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಯುವಕನೋರ್ವನನ್ನು ಕೆದಿಲದಿಂದ ಪರಿಚಯದ ಮೂವರು ರಿಕ್ಷಾವೊಂದರಲ್ಲಿ ಅಪಹರಿಸಿ ಕರೆದೊಯ್ದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ತೆಕ್ಕಾರಿನ ಮಹಮ್ಮದ್ ಇರ್ಷಾದ್ (26ವ) ಅಪಹರಣಕ್ಕೊಳಗಾಗಿ ಹಲ್ಲೆಗೊಳಗಾದವರು.

ಘಟನೆ ವಿವರ: ‘ಮೇ 25ಕ್ಕೆ ಕಾಸರಗೋಡಿನಿಂದ ಬೆಳ್ತಂಗಡಿ ಮನೆಗೆ ಬಂದಾಗ ಅಲ್ಲಿದ್ದ ಅಕ್ಕ ಸೈನಾಜ್ ಅವರನ್ನು ಮನೆಯಾದ ಕರುವೇಲು ಎಂಬಲ್ಲಿಗೆ ಸ್ಕೂಟರ್‌ನಲ್ಲಿ ಬಿಟ್ಟು ಬಳಿಕ ಕೆದಿಲ ಗ್ರಾಮದ ಗಡಿಯಾರ ಮಸೀದಿ ಬಳಿ ಸ್ಕೂಟರ್ ಅನ್ನು ತನ್ನ ಬಾವನಿಗೆ ನೀಡಲು ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಆಸೀಫ್ ಯಾನೆ ಅಚ್ಚಿ, ಶಾಕೀರ್ ಮತ್ತು ಆಸೀಫ್ ಎಂಬವರು ನನ್ನನ್ನು ಆಟೋ ರಿಕ್ಷಾವೊಂದರಲ್ಲಿ ಅಪಹರಿಸಿ, ಸಜೀಪ ಎಂಬಲ್ಲಿನ ಗುಡ್ಡಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಮೇ 26ರಂದು ರಾತ್ರಿಯ ತನಕ ಗುಡ್ಡದಲ್ಲೇ ಇರಿಸಿ ಹಲ್ಲೆ ನಡೆಸಿದ್ದಾರೆ. ಮೇ27ರಂದು ಆರೋಪಿಗಳು ನಿದ್ರೆಯಲ್ಲಿದ್ದಾಗ ಅವರಿಗೆ ತಿಳಿಯದಂತೆ ತಪ್ಪಿಸಿಕೊಂಡು ಬಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ’ ಮಹಮ್ಮದ್ ಇರ್ಷಾದ್ ತಿಳಿಸಿದ್ದಾರೆ. ಆರೋಪಿಗಳ ಪೈಕಿ ಶಾಕೀರ್ ಎಂಬವರು ಹಣ ಕೊಡಲು ಬಾಕಿ ಇರುವುದನ್ನು ಕೇಳಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya
error: Content is protected !!