26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

ಪುತ್ತೂರು: ಬೆಳ್ತಂಗಡಿಯ ತೆಕ್ಕಾರು ನಿವಾಸಿಯಾಗಿದ್ದು ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಯುವಕನೋರ್ವನನ್ನು ಕೆದಿಲದಿಂದ ಪರಿಚಯದ ಮೂವರು ರಿಕ್ಷಾವೊಂದರಲ್ಲಿ ಅಪಹರಿಸಿ ಕರೆದೊಯ್ದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ತೆಕ್ಕಾರಿನ ಮಹಮ್ಮದ್ ಇರ್ಷಾದ್ (26ವ) ಅಪಹರಣಕ್ಕೊಳಗಾಗಿ ಹಲ್ಲೆಗೊಳಗಾದವರು.

ಘಟನೆ ವಿವರ: ‘ಮೇ 25ಕ್ಕೆ ಕಾಸರಗೋಡಿನಿಂದ ಬೆಳ್ತಂಗಡಿ ಮನೆಗೆ ಬಂದಾಗ ಅಲ್ಲಿದ್ದ ಅಕ್ಕ ಸೈನಾಜ್ ಅವರನ್ನು ಮನೆಯಾದ ಕರುವೇಲು ಎಂಬಲ್ಲಿಗೆ ಸ್ಕೂಟರ್‌ನಲ್ಲಿ ಬಿಟ್ಟು ಬಳಿಕ ಕೆದಿಲ ಗ್ರಾಮದ ಗಡಿಯಾರ ಮಸೀದಿ ಬಳಿ ಸ್ಕೂಟರ್ ಅನ್ನು ತನ್ನ ಬಾವನಿಗೆ ನೀಡಲು ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಆಸೀಫ್ ಯಾನೆ ಅಚ್ಚಿ, ಶಾಕೀರ್ ಮತ್ತು ಆಸೀಫ್ ಎಂಬವರು ನನ್ನನ್ನು ಆಟೋ ರಿಕ್ಷಾವೊಂದರಲ್ಲಿ ಅಪಹರಿಸಿ, ಸಜೀಪ ಎಂಬಲ್ಲಿನ ಗುಡ್ಡಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಮೇ 26ರಂದು ರಾತ್ರಿಯ ತನಕ ಗುಡ್ಡದಲ್ಲೇ ಇರಿಸಿ ಹಲ್ಲೆ ನಡೆಸಿದ್ದಾರೆ. ಮೇ27ರಂದು ಆರೋಪಿಗಳು ನಿದ್ರೆಯಲ್ಲಿದ್ದಾಗ ಅವರಿಗೆ ತಿಳಿಯದಂತೆ ತಪ್ಪಿಸಿಕೊಂಡು ಬಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ’ ಮಹಮ್ಮದ್ ಇರ್ಷಾದ್ ತಿಳಿಸಿದ್ದಾರೆ. ಆರೋಪಿಗಳ ಪೈಕಿ ಶಾಕೀರ್ ಎಂಬವರು ಹಣ ಕೊಡಲು ಬಾಕಿ ಇರುವುದನ್ನು ಕೇಳಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya
error: Content is protected !!