26 C
ಪುತ್ತೂರು, ಬೆಳ್ತಂಗಡಿ
May 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ವತಿಯಿಂದ ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ಅಂಗವಾಗಿ ಬೆಳ್ತಂಗಡಿ ಮಂಡಲ ಮಟ್ಟದ ಪ್ರಶಿಕ್ಷಣ ವರ್ಗ ಮೇ. 28 ರಂದು ಸೂರ್ಯಕಮಲ್ ಸಭಾಂಗಣದಲ್ಲಿ ಆರಂಭವಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಪ್ರತಾಪ್ ಸಿಂಹ ನಾಯಕ್, ಜಯಂತ್ ಕೋಟ್ಯಾನ್ ಮರೋಡಿ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಸೀತಾರಾಮ್ ಬೆಳಾಲು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.ಮೇ 28 ಮತ್ತು 29 ರಂದು ಎರಡು ದಿನಗಳ ಕಾಲ ನಡೆಯುವ ಈ ಪ್ರಶಿಕ್ಷಣ ವರ್ಗದಲ್ಲಿ ಮಂಡಲದ ಪ್ರಮುಖ ಪದಾಧಿಕಾರಿಗಳು, ಶಕ್ತಿ ಕೇಂದ್ರ ಪ್ರಮುಖರು ಮತ್ತು ಬೂತ್ ಅಧ್ಯಕ್ಷರು ಭಾಗವಹಿಸಿದರು.

ಪಕ್ಷದ ಸಿದ್ಧಾಂತ, ಸಂಘಟನಾತ್ಮಕ ವಿಷಯಗಳು, ಚುನಾವಣಾ ನಿರ್ವಹಣೆ ಮತ್ತು ಕೇಂದ್ರ-ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಕಾರ್ಯಕರ್ತರಿಗೆ ತರಬೇತಿ ನೀಡಲಾಯಿತು.ಸಭಾಂಗಣವನ್ನು ಕೇಸರಿ ಧ್ವಜಗಳು ಮತ್ತು ಪಂ. ದೀನದಯಾಳ್‌ ಉಪಾಧ್ಯಾಯ ಅವರ ಭಾವಚಿತ್ರದೊಂದಿಗೆ ಸಿಂಗರಿಸಲಾಗಿತ್ತು. ಭಾಗವಹಿಸಿದ ಎಲ್ಲ ಕಾರ್ಯಕರ್ತರಿಗೆ ಪ್ರಶಿಕ್ಷಣ ಕೈಪಿಡಿ ಮತ್ತು ನೋಟ್‌ಬುಕ್ ವಿತರಿಸಲಾಯಿತು. ಬಿಜೆಪಿ ರಾಜ್ಯ ಘಟಕವು 2026ರ ಚುನಾವಣೆ ದೃಷ್ಟಿಯಿಂದ ರಾಜ್ಯದ ಎಲ್ಲ ಮಂಡಲಗಳಲ್ಲಿ ಈ ಪ್ರಶಿಕ್ಷಣ ಮಹಾಭಿಯಾನವನ್ನು ಹಮ್ಮಿಕೊಂಡಿದೆ.


ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಕಾರ್ಯಕರ್ತರನ್ನು ಸೈದ್ಧಾಂತಿಕವಾಗಿ ಸಜ್ಜುಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.

Related posts

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya
error: Content is protected !!