26 C
ಪುತ್ತೂರು, ಬೆಳ್ತಂಗಡಿ
May 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

ಅಳದಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು, ಹಾಗೂ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು, ಇದರ ವತಿಯಿಂದ ಶಿವಗಿರಿ ಕ್ಷೇತ್ರ ದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು,


ಮಂಗಳೂರು ರೈಲ್ವೆ ನಿಲ್ದಾಣದಿಂದ ಹೊರಟು ವರ್ಕಳ ಶಿವಗಿರಿ ಆಶ್ರಮ ತಲುಪಿ ಅಲ್ಲಿಂದ ಶಾರದಾ ಪೀಠ ದರ್ಶನ, ಯಜ್ಞ ಮಂಟಪ, ವಿಶ್ರಾಂತಿ ಸ್ಥಳ ವೀಕ್ಷಿಸಿ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿಗಳ ಮೂಲ ಸಮಾಧಿ ದರ್ಶನ ಮಾಡಿ ಮಠದಲ್ಲಿ ಗುರು ಪೂಜೆ ಮುಗಿಸಿ ಚೆಂಬಲತಿಯಲ್ಲಿ ನಾರಾಯಣ ಗುರುಗಳ ಜನ್ಮ ಸ್ಥಳ ಸಂದರ್ಶಿಸಿ. ಮದ್ಯಾಹ್ನ ಕುಂನ್ನುಂಪಾರ ಬಾಲ ಸುಬ್ರಮಣ್ಯ ದೇವರ ದರ್ಶನ, ಗುರು ಪೂಜೆ, ಅರವಿಪುರ ದೇವರ ದರ್ಶನ ನಂತರ ತಮಿಳುನಾಡಿನ ಕನ್ಯಾಕುಮಾರಿಗೆ ಹೋಗಿ ಅಲ್ಲಿ ಕನ್ಯಾಕುಮಾರಿ ದೇವಿಯ ದರ್ಶನ ಪಡೆದು ಮರುದಿನ ಮರುತ ಮಲೆಯ ನಾರಾಯಣ ಗುರುಗಳು 6 ವರ್ಷ ತಪ್ಪಸ್ಸನ್ನಾಚರಿಸಿದ ಗುಹೆ ವೀಕ್ಷಣೆ ನಂತರ ಇಂದ್ರನು ಪಾಪವನ್ನು ತೊಳೆದ ಕೆರೆ ಹಾಗೂ ಸುಚೀಂದ್ರ ದೇವರ ದರ್ಶನ , ತಿರುವನಂತಪುರದ ಅನಂತ ಪದ್ಮನಾಭ ದೇವರ ದರ್ಶನ ಪಡೆದರು. ಈ ಯಾತ್ರೆಯ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಶಿವಗಿರಿಯವರು ನೀಡಿದರು. ಎರಡು ದಿನಗಳ ಈ ಯಾತ್ರೆಯಲ್ಲಿ 41 ಜನ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya
error: Content is protected !!