26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

ಪುತ್ತೂರು: ಬೆಳ್ತಂಗಡಿಯ ತೆಕ್ಕಾರು ನಿವಾಸಿಯಾಗಿದ್ದು ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಯುವಕನೋರ್ವನನ್ನು ಕೆದಿಲದಿಂದ ಪರಿಚಯದ ಮೂವರು ರಿಕ್ಷಾವೊಂದರಲ್ಲಿ ಅಪಹರಿಸಿ ಕರೆದೊಯ್ದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ತೆಕ್ಕಾರಿನ ಮಹಮ್ಮದ್ ಇರ್ಷಾದ್ (26ವ) ಅಪಹರಣಕ್ಕೊಳಗಾಗಿ ಹಲ್ಲೆಗೊಳಗಾದವರು.

ಘಟನೆ ವಿವರ: ‘ಮೇ 25ಕ್ಕೆ ಕಾಸರಗೋಡಿನಿಂದ ಬೆಳ್ತಂಗಡಿ ಮನೆಗೆ ಬಂದಾಗ ಅಲ್ಲಿದ್ದ ಅಕ್ಕ ಸೈನಾಜ್ ಅವರನ್ನು ಮನೆಯಾದ ಕರುವೇಲು ಎಂಬಲ್ಲಿಗೆ ಸ್ಕೂಟರ್‌ನಲ್ಲಿ ಬಿಟ್ಟು ಬಳಿಕ ಕೆದಿಲ ಗ್ರಾಮದ ಗಡಿಯಾರ ಮಸೀದಿ ಬಳಿ ಸ್ಕೂಟರ್ ಅನ್ನು ತನ್ನ ಬಾವನಿಗೆ ನೀಡಲು ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಆಸೀಫ್ ಯಾನೆ ಅಚ್ಚಿ, ಶಾಕೀರ್ ಮತ್ತು ಆಸೀಫ್ ಎಂಬವರು ನನ್ನನ್ನು ಆಟೋ ರಿಕ್ಷಾವೊಂದರಲ್ಲಿ ಅಪಹರಿಸಿ, ಸಜೀಪ ಎಂಬಲ್ಲಿನ ಗುಡ್ಡಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಮೇ 26ರಂದು ರಾತ್ರಿಯ ತನಕ ಗುಡ್ಡದಲ್ಲೇ ಇರಿಸಿ ಹಲ್ಲೆ ನಡೆಸಿದ್ದಾರೆ. ಮೇ27ರಂದು ಆರೋಪಿಗಳು ನಿದ್ರೆಯಲ್ಲಿದ್ದಾಗ ಅವರಿಗೆ ತಿಳಿಯದಂತೆ ತಪ್ಪಿಸಿಕೊಂಡು ಬಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ’ ಮಹಮ್ಮದ್ ಇರ್ಷಾದ್ ತಿಳಿಸಿದ್ದಾರೆ. ಆರೋಪಿಗಳ ಪೈಕಿ ಶಾಕೀರ್ ಎಂಬವರು ಹಣ ಕೊಡಲು ಬಾಕಿ ಇರುವುದನ್ನು ಕೇಳಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಉಜಿರೆ: ನೀರಚಿಲುಮೆ ಬಳಿ ಕೆಎಸ್‌ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು, ಸಹಸವಾರ ಗಾಯ

Suddi Udaya
error: Content is protected !!