July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಮತ್ತು ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಮೇ 28 ರಂದು ಕುಲಾಲ ಭವನ ಗುರುವಾಯನಕೆರೆಯಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಅಧ್ಯಕ್ಷ ಸೋಮಯ ಹನೈನಡೆ ಅವರು ಮಾತನಾಡಿ, ಸಮಾಜದ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ವಿದ್ಯಾವಂತರಾಗಿ ಸಮಾಜದ ಏಳಿಗೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು. ಜೊತೆಗೆ ತಂದೆ-ತಾಯಿ ಹಾಗೂ ಗುರುಹಿರಿಯರಿಗೆ ಗೌರವ ನೀಡುವ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾಸ್ಕರ್ ಎಂ. ಪೆರುವಾಯಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ರೀತಿಯ ಪ್ರೋತ್ಸಾಹಗಳನ್ನು ಸಂಘದ ವತಿಯಿಂದ ನೀಡಲಾಗುತ್ತಿದೆ. ಹಾಗೆಯೇ ಹಿರಿಯ ನಾಗರಿಕರಿಗೆ ತುರ್ತು ಸಂದರ್ಭಗಳಲ್ಲಿ ಧನ ಸಹಾಯ ಒದಗಿಸಲಾಗುತ್ತಿದ್ದು, ಠೇವಣಿದಾರರಿಗೆ ಆಕರ್ಷಕ ಬಡ್ಡಿದರದ ಸೌಲಭ್ಯವನ್ನೂ ಸಂಘ ನೀಡುತ್ತಿದೆ ಎಂದು ಹೇಳಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಹಿರಿಯ ನಾಗರಿಕರಿಗೆ ಮಾಶಾಸನ ನೀಡುವಂತಹ ಯೋಜನೆಯನ್ನು ಸಹ ಸಂಘದ ವತಿಯಿಂದ ಹಮ್ಮಿಕೊಳ್ಳುವ ಉದ್ದೇಶವಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಪುತ್ತೂರು ಸಂಘದ ಉಪಾಧ್ಯಕ್ಷ ದಾಮೋದರ ಕುಲಾಲ್, ನಿರ್ದೇಶಕರಾದ ಹೆಚ್. ಪದ್ಮಕುಮಾರ್ ಮತ್ತು ಗಣೇಶ್ ಕುಲಾಲ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಲಾಯಿತು.
ತಾಲೂಕು ಸಂಘದ ನಿರ್ದೇಶಕ ದಿನೇಶ್ ಮಾಲಾಡಿ ಸ್ವಾಗತಿಸಿದರು. ಸದಾನಂದ ಕುಲಾಲ್ ವಿದ್ಯಾರ್ಥಿಗಳ ವಿವರ ನೀಡಿದರು. ಪ್ರಧಾನ ಕಾರ್ಯದರ್ಶಿ ಉಪನ್ಯಾಸಕ ಸುಧೀರ್ ಕೆ.ಎನ್ ಕಾರ್ಯಕ್ರಮ ನಿರೂಪಿಸಿ, ಸಂದೇಶ್ ಕುಮಾರ್ ವಂದಿಸಿದರು.

Related posts

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya
error: Content is protected !!