26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

ಅಳದಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು, ಹಾಗೂ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು, ಇದರ ವತಿಯಿಂದ ಶಿವಗಿರಿ ಕ್ಷೇತ್ರ ದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು,


ಮಂಗಳೂರು ರೈಲ್ವೆ ನಿಲ್ದಾಣದಿಂದ ಹೊರಟು ವರ್ಕಳ ಶಿವಗಿರಿ ಆಶ್ರಮ ತಲುಪಿ ಅಲ್ಲಿಂದ ಶಾರದಾ ಪೀಠ ದರ್ಶನ, ಯಜ್ಞ ಮಂಟಪ, ವಿಶ್ರಾಂತಿ ಸ್ಥಳ ವೀಕ್ಷಿಸಿ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿಗಳ ಮೂಲ ಸಮಾಧಿ ದರ್ಶನ ಮಾಡಿ ಮಠದಲ್ಲಿ ಗುರು ಪೂಜೆ ಮುಗಿಸಿ ಚೆಂಬಲತಿಯಲ್ಲಿ ನಾರಾಯಣ ಗುರುಗಳ ಜನ್ಮ ಸ್ಥಳ ಸಂದರ್ಶಿಸಿ. ಮದ್ಯಾಹ್ನ ಕುಂನ್ನುಂಪಾರ ಬಾಲ ಸುಬ್ರಮಣ್ಯ ದೇವರ ದರ್ಶನ, ಗುರು ಪೂಜೆ, ಅರವಿಪುರ ದೇವರ ದರ್ಶನ ನಂತರ ತಮಿಳುನಾಡಿನ ಕನ್ಯಾಕುಮಾರಿಗೆ ಹೋಗಿ ಅಲ್ಲಿ ಕನ್ಯಾಕುಮಾರಿ ದೇವಿಯ ದರ್ಶನ ಪಡೆದು ಮರುದಿನ ಮರುತ ಮಲೆಯ ನಾರಾಯಣ ಗುರುಗಳು 6 ವರ್ಷ ತಪ್ಪಸ್ಸನ್ನಾಚರಿಸಿದ ಗುಹೆ ವೀಕ್ಷಣೆ ನಂತರ ಇಂದ್ರನು ಪಾಪವನ್ನು ತೊಳೆದ ಕೆರೆ ಹಾಗೂ ಸುಚೀಂದ್ರ ದೇವರ ದರ್ಶನ , ತಿರುವನಂತಪುರದ ಅನಂತ ಪದ್ಮನಾಭ ದೇವರ ದರ್ಶನ ಪಡೆದರು. ಈ ಯಾತ್ರೆಯ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಶಿವಗಿರಿಯವರು ನೀಡಿದರು. ಎರಡು ದಿನಗಳ ಈ ಯಾತ್ರೆಯಲ್ಲಿ 41 ಜನ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya
error: Content is protected !!