26 C
ಪುತ್ತೂರು, ಬೆಳ್ತಂಗಡಿ
May 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

ಅಳದಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು, ಹಾಗೂ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು, ಇದರ ವತಿಯಿಂದ ಶಿವಗಿರಿ ಕ್ಷೇತ್ರ ದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು,


ಮಂಗಳೂರು ರೈಲ್ವೆ ನಿಲ್ದಾಣದಿಂದ ಹೊರಟು ವರ್ಕಳ ಶಿವಗಿರಿ ಆಶ್ರಮ ತಲುಪಿ ಅಲ್ಲಿಂದ ಶಾರದಾ ಪೀಠ ದರ್ಶನ, ಯಜ್ಞ ಮಂಟಪ, ವಿಶ್ರಾಂತಿ ಸ್ಥಳ ವೀಕ್ಷಿಸಿ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿಗಳ ಮೂಲ ಸಮಾಧಿ ದರ್ಶನ ಮಾಡಿ ಮಠದಲ್ಲಿ ಗುರು ಪೂಜೆ ಮುಗಿಸಿ ಚೆಂಬಲತಿಯಲ್ಲಿ ನಾರಾಯಣ ಗುರುಗಳ ಜನ್ಮ ಸ್ಥಳ ಸಂದರ್ಶಿಸಿ. ಮದ್ಯಾಹ್ನ ಕುಂನ್ನುಂಪಾರ ಬಾಲ ಸುಬ್ರಮಣ್ಯ ದೇವರ ದರ್ಶನ, ಗುರು ಪೂಜೆ, ಅರವಿಪುರ ದೇವರ ದರ್ಶನ ನಂತರ ತಮಿಳುನಾಡಿನ ಕನ್ಯಾಕುಮಾರಿಗೆ ಹೋಗಿ ಅಲ್ಲಿ ಕನ್ಯಾಕುಮಾರಿ ದೇವಿಯ ದರ್ಶನ ಪಡೆದು ಮರುದಿನ ಮರುತ ಮಲೆಯ ನಾರಾಯಣ ಗುರುಗಳು 6 ವರ್ಷ ತಪ್ಪಸ್ಸನ್ನಾಚರಿಸಿದ ಗುಹೆ ವೀಕ್ಷಣೆ ನಂತರ ಇಂದ್ರನು ಪಾಪವನ್ನು ತೊಳೆದ ಕೆರೆ ಹಾಗೂ ಸುಚೀಂದ್ರ ದೇವರ ದರ್ಶನ , ತಿರುವನಂತಪುರದ ಅನಂತ ಪದ್ಮನಾಭ ದೇವರ ದರ್ಶನ ಪಡೆದರು. ಈ ಯಾತ್ರೆಯ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಶಿವಗಿರಿಯವರು ನೀಡಿದರು. ಎರಡು ದಿನಗಳ ಈ ಯಾತ್ರೆಯಲ್ಲಿ 41 ಜನ ಸದಸ್ಯರು ಭಾಗವಹಿಸಿದರು.

Related posts

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

Suddi Udaya
error: Content is protected !!