26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

ಪುತ್ತೂರು: ಬೆಳ್ತಂಗಡಿಯ ತೆಕ್ಕಾರು ನಿವಾಸಿಯಾಗಿದ್ದು ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಯುವಕನೋರ್ವನನ್ನು ಕೆದಿಲದಿಂದ ಪರಿಚಯದ ಮೂವರು ರಿಕ್ಷಾವೊಂದರಲ್ಲಿ ಅಪಹರಿಸಿ ಕರೆದೊಯ್ದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ತೆಕ್ಕಾರಿನ ಮಹಮ್ಮದ್ ಇರ್ಷಾದ್ (26ವ) ಅಪಹರಣಕ್ಕೊಳಗಾಗಿ ಹಲ್ಲೆಗೊಳಗಾದವರು.

ಘಟನೆ ವಿವರ: ‘ಮೇ 25ಕ್ಕೆ ಕಾಸರಗೋಡಿನಿಂದ ಬೆಳ್ತಂಗಡಿ ಮನೆಗೆ ಬಂದಾಗ ಅಲ್ಲಿದ್ದ ಅಕ್ಕ ಸೈನಾಜ್ ಅವರನ್ನು ಮನೆಯಾದ ಕರುವೇಲು ಎಂಬಲ್ಲಿಗೆ ಸ್ಕೂಟರ್‌ನಲ್ಲಿ ಬಿಟ್ಟು ಬಳಿಕ ಕೆದಿಲ ಗ್ರಾಮದ ಗಡಿಯಾರ ಮಸೀದಿ ಬಳಿ ಸ್ಕೂಟರ್ ಅನ್ನು ತನ್ನ ಬಾವನಿಗೆ ನೀಡಲು ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಆಸೀಫ್ ಯಾನೆ ಅಚ್ಚಿ, ಶಾಕೀರ್ ಮತ್ತು ಆಸೀಫ್ ಎಂಬವರು ನನ್ನನ್ನು ಆಟೋ ರಿಕ್ಷಾವೊಂದರಲ್ಲಿ ಅಪಹರಿಸಿ, ಸಜೀಪ ಎಂಬಲ್ಲಿನ ಗುಡ್ಡಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಮೇ 26ರಂದು ರಾತ್ರಿಯ ತನಕ ಗುಡ್ಡದಲ್ಲೇ ಇರಿಸಿ ಹಲ್ಲೆ ನಡೆಸಿದ್ದಾರೆ. ಮೇ27ರಂದು ಆರೋಪಿಗಳು ನಿದ್ರೆಯಲ್ಲಿದ್ದಾಗ ಅವರಿಗೆ ತಿಳಿಯದಂತೆ ತಪ್ಪಿಸಿಕೊಂಡು ಬಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ’ ಮಹಮ್ಮದ್ ಇರ್ಷಾದ್ ತಿಳಿಸಿದ್ದಾರೆ. ಆರೋಪಿಗಳ ಪೈಕಿ ಶಾಕೀರ್ ಎಂಬವರು ಹಣ ಕೊಡಲು ಬಾಕಿ ಇರುವುದನ್ನು ಕೇಳಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya
error: Content is protected !!