26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ವತಿಯಿಂದ ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ಅಂಗವಾಗಿ ಬೆಳ್ತಂಗಡಿ ಮಂಡಲ ಮಟ್ಟದ ಪ್ರಶಿಕ್ಷಣ ವರ್ಗ ಮೇ. 28 ರಂದು ಸೂರ್ಯಕಮಲ್ ಸಭಾಂಗಣದಲ್ಲಿ ಆರಂಭವಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಪ್ರತಾಪ್ ಸಿಂಹ ನಾಯಕ್, ಜಯಂತ್ ಕೋಟ್ಯಾನ್ ಮರೋಡಿ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಸೀತಾರಾಮ್ ಬೆಳಾಲು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.ಮೇ 28 ಮತ್ತು 29 ರಂದು ಎರಡು ದಿನಗಳ ಕಾಲ ನಡೆಯುವ ಈ ಪ್ರಶಿಕ್ಷಣ ವರ್ಗದಲ್ಲಿ ಮಂಡಲದ ಪ್ರಮುಖ ಪದಾಧಿಕಾರಿಗಳು, ಶಕ್ತಿ ಕೇಂದ್ರ ಪ್ರಮುಖರು ಮತ್ತು ಬೂತ್ ಅಧ್ಯಕ್ಷರು ಭಾಗವಹಿಸಿದರು.

ಪಕ್ಷದ ಸಿದ್ಧಾಂತ, ಸಂಘಟನಾತ್ಮಕ ವಿಷಯಗಳು, ಚುನಾವಣಾ ನಿರ್ವಹಣೆ ಮತ್ತು ಕೇಂದ್ರ-ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಕಾರ್ಯಕರ್ತರಿಗೆ ತರಬೇತಿ ನೀಡಲಾಯಿತು.ಸಭಾಂಗಣವನ್ನು ಕೇಸರಿ ಧ್ವಜಗಳು ಮತ್ತು ಪಂ. ದೀನದಯಾಳ್‌ ಉಪಾಧ್ಯಾಯ ಅವರ ಭಾವಚಿತ್ರದೊಂದಿಗೆ ಸಿಂಗರಿಸಲಾಗಿತ್ತು. ಭಾಗವಹಿಸಿದ ಎಲ್ಲ ಕಾರ್ಯಕರ್ತರಿಗೆ ಪ್ರಶಿಕ್ಷಣ ಕೈಪಿಡಿ ಮತ್ತು ನೋಟ್‌ಬುಕ್ ವಿತರಿಸಲಾಯಿತು. ಬಿಜೆಪಿ ರಾಜ್ಯ ಘಟಕವು 2026ರ ಚುನಾವಣೆ ದೃಷ್ಟಿಯಿಂದ ರಾಜ್ಯದ ಎಲ್ಲ ಮಂಡಲಗಳಲ್ಲಿ ಈ ಪ್ರಶಿಕ್ಷಣ ಮಹಾಭಿಯಾನವನ್ನು ಹಮ್ಮಿಕೊಂಡಿದೆ.


ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಕಾರ್ಯಕರ್ತರನ್ನು ಸೈದ್ಧಾಂತಿಕವಾಗಿ ಸಜ್ಜುಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.

Related posts

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya
error: Content is protected !!