July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

ಅಳದಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು, ಹಾಗೂ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು, ಇದರ ವತಿಯಿಂದ ಶಿವಗಿರಿ ಕ್ಷೇತ್ರ ದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು,


ಮಂಗಳೂರು ರೈಲ್ವೆ ನಿಲ್ದಾಣದಿಂದ ಹೊರಟು ವರ್ಕಳ ಶಿವಗಿರಿ ಆಶ್ರಮ ತಲುಪಿ ಅಲ್ಲಿಂದ ಶಾರದಾ ಪೀಠ ದರ್ಶನ, ಯಜ್ಞ ಮಂಟಪ, ವಿಶ್ರಾಂತಿ ಸ್ಥಳ ವೀಕ್ಷಿಸಿ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿಗಳ ಮೂಲ ಸಮಾಧಿ ದರ್ಶನ ಮಾಡಿ ಮಠದಲ್ಲಿ ಗುರು ಪೂಜೆ ಮುಗಿಸಿ ಚೆಂಬಲತಿಯಲ್ಲಿ ನಾರಾಯಣ ಗುರುಗಳ ಜನ್ಮ ಸ್ಥಳ ಸಂದರ್ಶಿಸಿ. ಮದ್ಯಾಹ್ನ ಕುಂನ್ನುಂಪಾರ ಬಾಲ ಸುಬ್ರಮಣ್ಯ ದೇವರ ದರ್ಶನ, ಗುರು ಪೂಜೆ, ಅರವಿಪುರ ದೇವರ ದರ್ಶನ ನಂತರ ತಮಿಳುನಾಡಿನ ಕನ್ಯಾಕುಮಾರಿಗೆ ಹೋಗಿ ಅಲ್ಲಿ ಕನ್ಯಾಕುಮಾರಿ ದೇವಿಯ ದರ್ಶನ ಪಡೆದು ಮರುದಿನ ಮರುತ ಮಲೆಯ ನಾರಾಯಣ ಗುರುಗಳು 6 ವರ್ಷ ತಪ್ಪಸ್ಸನ್ನಾಚರಿಸಿದ ಗುಹೆ ವೀಕ್ಷಣೆ ನಂತರ ಇಂದ್ರನು ಪಾಪವನ್ನು ತೊಳೆದ ಕೆರೆ ಹಾಗೂ ಸುಚೀಂದ್ರ ದೇವರ ದರ್ಶನ , ತಿರುವನಂತಪುರದ ಅನಂತ ಪದ್ಮನಾಭ ದೇವರ ದರ್ಶನ ಪಡೆದರು. ಈ ಯಾತ್ರೆಯ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಶಿವಗಿರಿಯವರು ನೀಡಿದರು. ಎರಡು ದಿನಗಳ ಈ ಯಾತ್ರೆಯಲ್ಲಿ 41 ಜನ ಸದಸ್ಯರು ಭಾಗವಹಿಸಿದರು.

Related posts

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya
error: Content is protected !!