26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

ಅಳದಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು, ಹಾಗೂ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು, ಇದರ ವತಿಯಿಂದ ಶಿವಗಿರಿ ಕ್ಷೇತ್ರ ದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು,


ಮಂಗಳೂರು ರೈಲ್ವೆ ನಿಲ್ದಾಣದಿಂದ ಹೊರಟು ವರ್ಕಳ ಶಿವಗಿರಿ ಆಶ್ರಮ ತಲುಪಿ ಅಲ್ಲಿಂದ ಶಾರದಾ ಪೀಠ ದರ್ಶನ, ಯಜ್ಞ ಮಂಟಪ, ವಿಶ್ರಾಂತಿ ಸ್ಥಳ ವೀಕ್ಷಿಸಿ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿಗಳ ಮೂಲ ಸಮಾಧಿ ದರ್ಶನ ಮಾಡಿ ಮಠದಲ್ಲಿ ಗುರು ಪೂಜೆ ಮುಗಿಸಿ ಚೆಂಬಲತಿಯಲ್ಲಿ ನಾರಾಯಣ ಗುರುಗಳ ಜನ್ಮ ಸ್ಥಳ ಸಂದರ್ಶಿಸಿ. ಮದ್ಯಾಹ್ನ ಕುಂನ್ನುಂಪಾರ ಬಾಲ ಸುಬ್ರಮಣ್ಯ ದೇವರ ದರ್ಶನ, ಗುರು ಪೂಜೆ, ಅರವಿಪುರ ದೇವರ ದರ್ಶನ ನಂತರ ತಮಿಳುನಾಡಿನ ಕನ್ಯಾಕುಮಾರಿಗೆ ಹೋಗಿ ಅಲ್ಲಿ ಕನ್ಯಾಕುಮಾರಿ ದೇವಿಯ ದರ್ಶನ ಪಡೆದು ಮರುದಿನ ಮರುತ ಮಲೆಯ ನಾರಾಯಣ ಗುರುಗಳು 6 ವರ್ಷ ತಪ್ಪಸ್ಸನ್ನಾಚರಿಸಿದ ಗುಹೆ ವೀಕ್ಷಣೆ ನಂತರ ಇಂದ್ರನು ಪಾಪವನ್ನು ತೊಳೆದ ಕೆರೆ ಹಾಗೂ ಸುಚೀಂದ್ರ ದೇವರ ದರ್ಶನ , ತಿರುವನಂತಪುರದ ಅನಂತ ಪದ್ಮನಾಭ ದೇವರ ದರ್ಶನ ಪಡೆದರು. ಈ ಯಾತ್ರೆಯ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಶಿವಗಿರಿಯವರು ನೀಡಿದರು. ಎರಡು ದಿನಗಳ ಈ ಯಾತ್ರೆಯಲ್ಲಿ 41 ಜನ ಸದಸ್ಯರು ಭಾಗವಹಿಸಿದರು.

Related posts

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya
error: Content is protected !!