28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

ಬೆಳ್ತಂಗಡಿ: ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರು ಶಿಕ್ಷಣ ಇಲಾಖೆಯಲ್ಲಿ ಸುಧೀರ್ಘ 32 ವರ್ಷಗಳ ಕಾಲ ಪ್ರಾಮಾಣಿಕವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಎಲ್ಲಾ ವಿದ್ಯಾರ್ಥಿಗಳ ಹಾಗೂ ಪೋಷಕರ ಹಿರಿಯ ವಿದ್ಯಾರ್ಥಿಗಳ ಸಾರ್ವಜನಿಕರ ಪ್ರೀತಿಗೆ ಪಾತ್ರರಾಗಿ ಶಿಕ್ಷಕ ವೃತ್ತಿಯಿಂದ ಮೇ 31 ರಂದು ನಿವೃತ್ತಿಗೊಳ್ಳಲಿರುವರು.

ಇವರು ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಟಿಸಿಎಚ್ ತರಬೇತಿ ಪಡೆದು 1994 ರಲ್ಲಿ ಸ.ಹಿ. ಪ್ರಾ. ಶಾಲೆ ಕುಂಜತ್ತೋಡಿ ಬೆಳ್ತಂಗಡಿ ತಾಲೂಕು ಇಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ 19 ವರ್ಷ ಸೇವೆ ಸಲ್ಲಿಸಿ, ಬಂಟ್ವಾಳ ತಾಲೂಕು ಪಾಂಡವರಕಲ್ಲು ಶಾಲೆಯಲ್ಲಿ 3 ವರ್ಷ, ಬಂಟ್ವಾಳ ತಾಲ್ಲೂಕಿನ ಕೆದ್ದಳಿಕೆ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ 6 ವರ್ಷ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಯಲ್ಲಿ 4 ವರ್ಷ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಮೇ 31 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

ಇವರಿಗೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸಂಘ , ದಕ್ಷಿಣ ಕನ್ನಡ ವತಿಯಿಂದ ಬೋಧಕರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜಿಲ್ಲಾಮಟ್ಟದ “ವಿದ್ಯಾರತ್ನ” ಪ್ರಶಸ್ತಿ ಲಭಿಸಿರುತ್ತದೆ.
ಇವರು ಪತಿ ನಿವೃತ್ತ ಮುಖ್ಯೋಪಾಧ್ಯಾಯರಾದ ಹೆಚ್. ಧರ್ಣಪ್ಪ ಗೌಡ ಹಟ್ಟತ್ತೋಡಿ, ಪುತ್ರ ಮೂಡಬಿದ್ರೆ ಎಸ್‌ಕೆಎಫ್ ಎಲಿಕ್ಸಿರ್ ಇಂಡಿಯಾ ಪ್ರೆ.ಲಿ. ಇಂಜಿನಿಯರ್ ಆದ ಆದರ್ಶ್ ಹಟ್ಟತ್ತೋಡಿ, ಸೊಸೆ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಉಪನ್ಯಾಸಕಿ ಶಿಲ್ಪಾ ಆದರ್ಶ ರವರೊಂದಿಗೆ ಪುಂಜಾಲಕಟ್ಟೆ ಹಟ್ಟತ್ತೋಡಿ ಎಂಬಲ್ಲಿ ವಾಸವಾಗಿದ್ದರೆ. ಪುತ್ರಿ ಫ್ಯಾಷನ್ ಡಿಸೈನರ್ ಅನುಷಾ ಅವಿನಾಶ್, ಇವರ ಕುಟುಂಬದಲ್ಲಿ ಒಟ್ಟು 13 ಜನ ಶಿಕ್ಷಕ ವೃತ್ತಿಯನ್ನು ಅವಲಂಬಿಸಿರುತ್ತಾರೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!