28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಬೆಳ್ತಂಗಡಿ: ಸರಕು ಸಾಗಾಟದ ಕಂಟೈನರ್ ಲಾರಿಯೊಂದು ಮಿನಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಮುಂಡಾಜೆ ಗ್ರಾಮದ ಶೀಟ್ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮೇ 30) ಮಧ್ಯಾಹ್ನ ನಡೆದಿದೆ.

ಮುಡಿಪುವಿನಿಂದ  ಕುಟುಂಬವೊಂದು  ಜಾವಗಲ್ ಗೆ   ತೆರಳುತಿದ್ದ  ಮಿನಿ ಬಸ್ಸಿಗೆ ಮುಂಡಾಜೆ  ಶೀಟ್ ಎಂಬಲ್ಲಿ  ಚಿಕ್ಕಮಗಳೂರು ಕಡೆಯಿಂದ ಉಜಿರೆ ಕಡೆ ಹೋಗುತಿದ್ದ ಸರಕು  ಸಾಗಾಟದ ಕಂಟೈನರ್ ಲಾರಿ  ಕಡೂರಿನಿಂದ ಧರ್ಮಸ್ಥಳಕ್ಕೆ ಬರುತಿದ್ದ ಕೆ ಎಸ್ ಆರ್ ಟಿ. ಸಿ. ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಮಿನಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಚಾಲಕ ಸ್ಥಳದಲ್ಲಿ ನಿಲ್ಲಿಸದೇ ಲಾರಿ ಸಹಿತ  ತಪ್ಪಿಸಿಕೊಂಡು ಬಂದಿದ್ದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಬಳಿ ಸಾರ್ವಜನಿಕರು ಲಾರಿಯನ್ನು ಅಡ್ಡ ಹಾಕಿದ್ದಾರೆ. ಮಿನಿ ಬಸ್ಸಿನ ಚಾಲಕ ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿ ಓವರ್ ಟೇಕ್ ಮಾಡುವ ವೇಳೆ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಬಸ್ಸನ್ನು ತೀರ ರಸ್ತೆ  ಬದಿಗೆ ಕೊಂಡೋಗಿದ್ದು ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದರೆ ಲಾರಿಯು ಮಿನಿ ಬಸ್ಸಿಗೆ ನೇರವಾಗಿ ಮುಖಾಮುಖಿ  ಡಿಕ್ಕಿ ಹೊಡೆಯುತಿದ್ದು ಬಸ್ ಚಾಲಕನ ಸಮಯ ಪ್ರಜ್ಞೆ ಯಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ  ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Related posts

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya
error: Content is protected !!