27.4 C
ಪುತ್ತೂರು, ಬೆಳ್ತಂಗಡಿ
May 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ

ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ವಸಂತೋತ್ಸವ ಕಾರ್ಯಕ್ರಮಲ್ಲಿ 51 ವರ್ಷಗಳ ಮೇಳದ ತಿರುಗಾಟ ಪೂರೈಸಿದ ಯಕ್ಷಗಾನ ಕಲಾವಿದ ವಸಂತಗೌಡ ಅವರನ್ನು ಯಕ್ಷ ಭಾರತಿ ಕನ್ಯಾಡಿ ಬೆಳ್ತಂಗಡಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಜೊತೆ ಕಾರ್ಯದರ್ಶಿ ರತ್ನವರ್ಮ ಜೈನ್ , ಟ್ರಸ್ಟಿಗಳಾದ ರವೀಂದ್ರ ಶೆಟ್ಟಿ ಬಳೆಂಜ, ಹರೀಶ ಕೊಳ್ತಿಗೆ, ಆಹ್ವಾನಿತ ಸದಸ್ಯರಾದ ಚಂದ್ರಶೇಖರ ಧರ್ಮಸ್ಥಳ, ಸಂಚಾಲಕ ಮಹೇಶ ಕನ್ಯಾಡಿ , ಮೇಳದ ಪ್ರಬಂಧಕರಾದ ಗಿರೀಶ್ ಹೆಗ್ಡೆ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಆಶ್ರಯದಲ್ಲಿ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಮತ್ತು ಮೇಳದ ಯಜಮಾನರಾದ ಡಿ. ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಕಲಾಭಿಮಾನಿಗಳ ಸಹಕಾರದಿಂದ ಕಲಾವಿದ ವಸಂತ ಗೌಡರ ಯಕ್ಷಗಾನ ಕಲಾಯಾನದ ಸುವರ್ಣ ಸಂಭ್ರಮ ವಸಂತೋತ್ಸವ ಸಮಾರಂಭವು ಅಮೃತವರ್ಷಿಣಿ ಸಭಾಭವನದಲ್ಲಿ ಗೌರವ ಸನ್ಮಾನ, ಯಕ್ಷಗಾನದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.

Related posts

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!