24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

ಮಂಗಳೂರು: ಆಶಾ ಕಾರ್ಯಕರ್ತೆಯರ ಮೇಲಿನ ಹೆಚ್ಚುತ್ತಿರುವ ಡಿಜಿಟಲ್ ಕೆಲಸದ ಒತ್ತಡ, ಪ್ರೋತ್ಸಾಹ ಧನ ವಿಳಂಬ ಹಾಗೂ ಸೇವಾ ಭದ್ರತೆ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾ ಆಶಾ ಕಾರ್ಯಕರ್ತೆಯರು ಹಾಗೂ ಜಿಲ್ಲಾ ಭಾರತೀಯ ಮಜ್ದೂರು ಸಂಘ (BMS)ದ ಮುಂದಾಳತ್ವದಲ್ಲಿ ಇಂದು(ಮೇ 30) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಹೆಚ್.ಆರ್. ತಿಮ್ಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮನವಿ ರವಾನಿಸಿ ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಯಿತು.
ಮನವಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಾರಿಯಲ್ಲಿರುವ “ಸಮಸ್ತ” ಡಿಜಿಟಲ್ ಆರೋಗ್ಯ ಮಾಹಿತಿ ವ್ಯವಸ್ಥೆ ಮೂಲಕ ಆಶಾ ಕಾರ್ಯಕರ್ತೆಯರ ಮೇಲೆ ಅತಿಯಾದ ಡಿಜಿಟಲ್ ಕೆಲಸದ ಹೊರೆ ಹೇರಲಾಗುತ್ತಿದ್ದು, ಮನೆಮನೆ ಭೇಟಿ, ಗರ್ಭಿಣಿಯರ ಆರೈಕೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಗಳ ಜೊತೆಗೆ ಗಂಟೆಗಟ್ಟಲೆ ಡೇಟಾ ದಾಖಲಿಸುವ ಅನಿವಾರ್ಯತೆ ಉಂಟಾಗಿದೆ ಎಂದು ತಿಳಿಸಲಾಗಿದೆ. ಇದರಿಂದ ಆರೋಗ್ಯ ಸೇವೆಯ ಗುಣಮಟ್ಟಕ್ಕೂ ಧಕ್ಕೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಮ್.ಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಹಾಗೂ ವಕೀಲರಾದ ಅನಿಲ್ ಕುಮಾರ್ ಯು, ಆಶಾ ಕಾರ್ಯಕರ್ತೆಯರು ಕೊರೊನಾ ಸೇರಿದಂತೆ ಸಂಕಷ್ಟದ ಸಂದರ್ಭಗಳಲ್ಲಿ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸಿದ್ದರೂ, ಇಂದು ಅವರಿಗೆ ತಕ್ಕ ಗೌರವ, ಭದ್ರತೆ ಹಾಗೂ ನ್ಯಾಯ ದೊರೆಯುತ್ತಿಲ್ಲ ಎಂದು ಹೇಳಿದರು. “ಸಮಸ್ತ” ಆ್ಯಪ್‌ನ ಹೆಚ್ಚುವರಿ ಒತ್ತಡವನ್ನು ಹಿಂಪಡೆಯಬೇಕು, ಪ್ರೋತ್ಸಾಹ ಧನವನ್ನು ನಿಗದಿತ ದಿನಾಂಕಕ್ಕೆ ಪಾವತಿಸಬೇಕು ಹಾಗೂ ನಾಲ್ಕು ವರ್ಷಗಳಿಂದ ಹೆಚ್ಚಳವಾಗದಿರುವ ಧನವನ್ನು ತಕ್ಷಣ ಪರಿಷ್ಕರಿಸಬೇಕು ಎಂದು ಆಗ್ರಹಿಸಿದರು.

ಮನವಿಯಲ್ಲಿ “ಸಮಸ್ತ” ಆ್ಯಪ್‌ನ ಹೆಚ್ಚುವರಿ ಕೆಲಸದ ಒತ್ತಡ ರದ್ದುಪಡಿಸುವುದು, ಪ್ರೋತ್ಸಾಹ ಧನವನ್ನು ಸಮಯಕ್ಕೆ ಬಿಡುಗಡೆಗೊಳಿಸುವುದು, ಪ್ರೋತ್ಸಾಹ ಧನ ಹೆಚ್ಚಳ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯ ಮಟ್ಟದ ಸಮಿತಿ ರಚಿಸುವಂತೆ ಒತ್ತಾಯಿಸಲಾಗಿದೆ.


ಈ ಸಂದರ್ಭದಲ್ಲಿ ಭಾರತೀಯ ಮಜ್ದೂರು ಸಂಘದ ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಜಿಲ್ಲಾ ಉಪಾಧ್ಯಕ್ಷ ರೋಹಿತಾಶ್ವ , ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘದ ರಾಜ್ಯ ಕಾರ್ಯದರ್ಶಿ ರೇವತಿ, ಬಂಟ್ವಾಳ ತಾಲೂಕು ಅಧ್ಯಕ್ಷೆ ತುಳಸಿ ದೇವರಾಜ್, ಕಾರ್ಯದರ್ಶಿ ಡೀಲಾಕ್ಷೀ, ಕೋಶಾಧಿಕಾರಿ ಸೌಮ್ಯ, ಗೌರವಾಧ್ಯಕ್ಷೆ ಗಿರಿಜಾ ನಾವೂರು, ಪ್ರಮುಖರಾದ ಪ್ರಮೀಳಾ, ಹರಿಣಾಕ್ಷೀ, ಪ್ರಮೀಳಾ ಮಾಣಿ, ಹೇಮಾವತಿ ಸೇರಿದಂತೆ ಆಶಾ ಕಾರ್ಯಕರ್ತೆಯರ ತಂಡ ಹಾಗೂ ಜಿಲ್ಲಾ BMS ಪ್ರಮುಖರು ಉಪಸ್ಥಿತರಿದ್ದರು.

Related posts

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya
error: Content is protected !!