July 18, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: 2025- 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರ ಫಲಿತಾಂಶದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ಅವರು 625 ಅಂಕಗಳಿಗೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಅಪೂರ್ವ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿನಿಯ ಈ ಅತ್ಯುನ್ನತ ಸಾಧನೆಯು ಶಾಲೆಗೆ, ಉಜಿರೆ ಪ್ರದೇಶಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ಗರಿ ಮೂಡಿಸಿದೆ. ಉಜಿರೆಯ ಸೂರ್ಯ ನಿವಾಸಿಗಳಾದ ಹರ್ಷೇಂದ್ರ ಕುಮಾರ್ ಹಾಗೂ ಶಾರದಾ ದಂಪತಿಗಳ ಪುತ್ರಿಯಾಗಿರುವ ಅನನ್ಯ, ತಮ್ಮ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ, ಪ್ರತಿಭೆ ಹಾಗೂ ಶಿಕ್ಷಕರ ಸಮರ್ಪಕ ಮಾರ್ಗದರ್ಶನದ ಮೂಲಕ ಈ ಅಮೋಘ ಸಾಧನೆಯನ್ನು ದಾಖಲಿಸಿದ್ದಾರೆ.

ಅನನ್ಯ ಅವರ ಅಣ್ಣ ಕೌಸ್ತು ಕೂಡ ಇದೇ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಕುಟುಂಬದ ಶೈಕ್ಷಣಿಕ ಪರಂಪರೆ ಹಾಗೂ ಪ್ರೋತ್ಸಾಹವೂ ಅನನ್ಯ ಅವರ ಯಶಸ್ಸಿಗೆ ಬಲವಾದ ಅಡಿಪಾಯವಾಗಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕ ವೃಂದ, ಆಡಳಿತ ಮಂಡಳಿಯ ಸದಸ್ಯರು, ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಅನನ್ಯ ಅವರ ಮುಂದಿನ ವಿದ್ಯಾಭ್ಯಾಸವು ಇನ್ನಷ್ಟು ಯಶಸ್ವಿಯಾಗಿ ಸಾಗಲಿ ಹಾಗೂ ಭವಿಷ್ಯದಲ್ಲಿ ಇನ್ನೂ ಉನ್ನತ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

Related posts

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya
error: Content is protected !!