23.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

ಬೆಳ್ತಂಗಡಿ: ಅನಿವಾಸಿ‌ ಬ್ರದರ್ಸ್ ಕುದ್ರಡ್ಕ ಎ.ಬಿ.ಕೆ ಸಾಂತ್ವನ ಕಾರುಣ್ಯ ಗಲ್ಫ್ ಸಮಿತಿ ಕುದ್ರಡ್ಕ ಇದರ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್” ಗಲ್ಫ್ ಸ್ನೇಹಿತರ ಸ್ನೇಹ-ಸಮ್ಮಿಲನ ಕಾರ್ಯಕ್ರಮ ಮೇ28 ರಂದು ಸೌದಿ ಅರೇಬಿಯಾದ ದಮ್ಮಾಮ್ “ಗಝಾಝ್” ಇಸ್ತಿರಾದಲ್ಲಿ ನಡೆಯಿತು.

ಸೌದಿ ಅರೇಬಿಯಾದ ವಿವಿಧ ಭಾಗಗಳಿಂದ ಸದಸ್ಯರು ಭಾಗವಹಿಸಿದ್ದು ಹಾಗೂ ಯುಏಯಿ, ದುಬೈ ಹಾಗೂ ಅಬುದಾಬಿ ಸೇರಿದಂತೆ ಹೆಚ್ಚಿನ ಗಲ್ಫ್ ಸದಸ್ಯರು ಆಧುನಿಕ ಆನ್ಲೈನ್ ತಂತ್ರಜ್ಞಾನ ಸಂಪರ್ಕದ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮವು ಆಧ್ಯಾತ್ಮಿಕ ದ್ಸಿಕ್ರ್ ಸ್ವಲಾತ್, ತಹ್ಲೀಲ್ ಸಮರ್ಪಣೆ, ಮಜ್ಲಿಸ್, ದುವಾಃದೊಂದಿಗೆ ಪ್ರಾರಂಭಿಸಲಾಯಿತು.

ಎ.ಬಿ.ಕೆ ಗಲ್ಫ್ ಸಮಿತಿ ಇದರ ಮಾರ್ಗದರ್ಶಕ ನಿಝಾರ್ ಕೆ.ಎಸ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮುಸ್ತಫಾ ಕೆ.ಎಮ್ ಕಳೆದ ಅವಧಿಯ ವರದಿ ಮಂಡಿಸಿದರು. ಸಾಮಾಜಿಕ-ಶೈಕ್ಷಣಿಕ ಸೇವೆ ಮತ್ತು ಜೀವಕಾರುಣ್ಯ ಸಾಂತ್ವನ ‌ಯಶಸ್ವಿ ಕಾರ್ಯವೈಖರಿಗಳು ಮತ್ತು ಭವಿಷ್ಯದಲ್ಲಿ ಹಮ್ಮಿಕೊಳ್ಳುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ವಾರ್ಷಿಕ ಬಜೆಟ್ ಪ್ರಸ್ತಾಪಿಸಿದರು.ಕೋಶಾಧಿಕಾರಿ ಶಂಸುದ್ದೀನ್ ಕುದ್ರಡ್ಕ ಲೆಕ್ಕಪತ್ರ ವಾಚಿಸಿದರು.ಈ ವೇಳೆ 2026-27ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ ಇಮ್ತಿಯಾಝ್ ಕುದ್ರಡ್ಕ, ಉಪಾಧ್ಯಕ್ಷರಾಗಿ ಸಮೀರ್ ಕೆ, ಪ್ರಧಾನ ಕಾರ್ಯದರ್ಶಿ ಮುಸ್ತಫಾ ಕೆ.ಎಮ್,ಜೊತೆ ಕಾರ್ಯದರ್ಶಿಯಾಗಿ ಮುಸ್ತಫಾ ಫೈಸ್ಟಾರ್, ಕೋಶಾಧಿಕಾರಿ ಶಂಸುದ್ದೀನ್ ಕುದ್ರಡ್ಕ ಹಾಗೂ ಕ್ಯಾಬಿನೆಟ್ ಸದಸ್ಯರುಗಳನ್ನೊಳಗೊಂಡ ನೂತನ ಸಮಿತಿ ರಚಿಸಲಾಯಿತು. ಕಾರ್ಯಕ್ರಮದಲ್ಲಿ “ಮೆಹ್ಫಿಲ್-ಈ-ಗಲ್ಫ್ ಮೀಟ್ ಸ್ನೇಹಿತರ ಚರ್ಚಾಗೋಷ್ಠಿ, ಸ್ನೇಹ ಭೋಜನ ಸಭೆಗೆ ಮೆರುಗು ತಂದುಕೊಟ್ಟಿತು.

Related posts

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪ.ಪೂ. ವಿಭಾಗದಲ್ಲಿ “ಹೂಡಿಕೆಯ ವಿವಿಧ ಅವಕಾಶ” ಗಳ ಕುರಿತು ಕಾರ್ಯಾಗಾರ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya
error: Content is protected !!