24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

ಬೆಳ್ತಂಗಡಿ: ಅನಿವಾಸಿ‌ ಬ್ರದರ್ಸ್ ಕುದ್ರಡ್ಕ ಎ.ಬಿ.ಕೆ ಸಾಂತ್ವನ ಕಾರುಣ್ಯ ಗಲ್ಫ್ ಸಮಿತಿ ಕುದ್ರಡ್ಕ ಇದರ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್” ಗಲ್ಫ್ ಸ್ನೇಹಿತರ ಸ್ನೇಹ-ಸಮ್ಮಿಲನ ಕಾರ್ಯಕ್ರಮ ಮೇ28 ರಂದು ಸೌದಿ ಅರೇಬಿಯಾದ ದಮ್ಮಾಮ್ “ಗಝಾಝ್” ಇಸ್ತಿರಾದಲ್ಲಿ ನಡೆಯಿತು.

ಸೌದಿ ಅರೇಬಿಯಾದ ವಿವಿಧ ಭಾಗಗಳಿಂದ ಸದಸ್ಯರು ಭಾಗವಹಿಸಿದ್ದು ಹಾಗೂ ಯುಏಯಿ, ದುಬೈ ಹಾಗೂ ಅಬುದಾಬಿ ಸೇರಿದಂತೆ ಹೆಚ್ಚಿನ ಗಲ್ಫ್ ಸದಸ್ಯರು ಆಧುನಿಕ ಆನ್ಲೈನ್ ತಂತ್ರಜ್ಞಾನ ಸಂಪರ್ಕದ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮವು ಆಧ್ಯಾತ್ಮಿಕ ದ್ಸಿಕ್ರ್ ಸ್ವಲಾತ್, ತಹ್ಲೀಲ್ ಸಮರ್ಪಣೆ, ಮಜ್ಲಿಸ್, ದುವಾಃದೊಂದಿಗೆ ಪ್ರಾರಂಭಿಸಲಾಯಿತು.

ಎ.ಬಿ.ಕೆ ಗಲ್ಫ್ ಸಮಿತಿ ಇದರ ಮಾರ್ಗದರ್ಶಕ ನಿಝಾರ್ ಕೆ.ಎಸ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮುಸ್ತಫಾ ಕೆ.ಎಮ್ ಕಳೆದ ಅವಧಿಯ ವರದಿ ಮಂಡಿಸಿದರು. ಸಾಮಾಜಿಕ-ಶೈಕ್ಷಣಿಕ ಸೇವೆ ಮತ್ತು ಜೀವಕಾರುಣ್ಯ ಸಾಂತ್ವನ ‌ಯಶಸ್ವಿ ಕಾರ್ಯವೈಖರಿಗಳು ಮತ್ತು ಭವಿಷ್ಯದಲ್ಲಿ ಹಮ್ಮಿಕೊಳ್ಳುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ವಾರ್ಷಿಕ ಬಜೆಟ್ ಪ್ರಸ್ತಾಪಿಸಿದರು.ಕೋಶಾಧಿಕಾರಿ ಶಂಸುದ್ದೀನ್ ಕುದ್ರಡ್ಕ ಲೆಕ್ಕಪತ್ರ ವಾಚಿಸಿದರು.ಈ ವೇಳೆ 2026-27ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ ಇಮ್ತಿಯಾಝ್ ಕುದ್ರಡ್ಕ, ಉಪಾಧ್ಯಕ್ಷರಾಗಿ ಸಮೀರ್ ಕೆ, ಪ್ರಧಾನ ಕಾರ್ಯದರ್ಶಿ ಮುಸ್ತಫಾ ಕೆ.ಎಮ್,ಜೊತೆ ಕಾರ್ಯದರ್ಶಿಯಾಗಿ ಮುಸ್ತಫಾ ಫೈಸ್ಟಾರ್, ಕೋಶಾಧಿಕಾರಿ ಶಂಸುದ್ದೀನ್ ಕುದ್ರಡ್ಕ ಹಾಗೂ ಕ್ಯಾಬಿನೆಟ್ ಸದಸ್ಯರುಗಳನ್ನೊಳಗೊಂಡ ನೂತನ ಸಮಿತಿ ರಚಿಸಲಾಯಿತು. ಕಾರ್ಯಕ್ರಮದಲ್ಲಿ “ಮೆಹ್ಫಿಲ್-ಈ-ಗಲ್ಫ್ ಮೀಟ್ ಸ್ನೇಹಿತರ ಚರ್ಚಾಗೋಷ್ಠಿ, ಸ್ನೇಹ ಭೋಜನ ಸಭೆಗೆ ಮೆರುಗು ತಂದುಕೊಟ್ಟಿತು.

Related posts

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya
error: Content is protected !!