ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ನಿವಾಸಿ ಭಾರತಿ ಶೆಟ್ಟಿ ಕ್ಯಾನ್ಸರ್ ಪೀಡಿತರು ಇವರಿಗೆ ಆರ್ಥಿಕ ಸಹಾಯವನ್ನು ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಕಾರ್ಯಕಾರಿ ಸಮಿತಿ ಸದಸ್ಯೆ ಸುಜಾತ ಶೆಟ್ಟಿ ಪೆರಿಂಜೆ ಇವರು ಭಾರತಿ ಶೆಟ್ಟಿ ಅವರ ಮನೆಗೆ ತೆರಳಿ ವಿತರಿಸಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವಲಯದ ಹಾಗೂ ಗ್ರಾಮ ಸಮಿತಿಯ ಪದಾಧಿಕಾರಿಗಳಾದ ರಾಜು ಶೆಟ್ಟಿ, ರವಿ ಶೆಟ್ಟಿ, ಪ್ರದೀಪ್ ಶೆಟ್ಟಿ, ಕಿರಣ್ ಶೆಟ್ಟಿ, ರಾಜೇಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶಿವಣ್ಣ ಶೆಟ್ಟಿ ಉಪಸ್ಥಿತರಿದ್ದರು. ಮಾತೃ ಸಂಘದ ಅಧ್ಯಕ್ಷ ಅಜಿತ್ ರೈ ಮಾಲಾಡಿ, ಬೆಳ್ತಂಗಡಿ ತಾಲೂಕಿನ ಸಂಚಾಲಕರಾದ ಎಂ.ಜಯರಾಂ ಭಂಡಾರಿ ಧರ್ಮಸ್ಥಳ ಹಾಗೂ ಸಹ ಸಂಚಾಲಕ ಕಿರಣ್ ಶೆಟ್ಟಿ ಸಹಕಾರ ನೀಡಿದರು.












