24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಬೆಳ್ತಂಗಡಿ: ಸರಕು ಸಾಗಾಟದ ಕಂಟೈನರ್ ಲಾರಿಯೊಂದು ಮಿನಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಮುಂಡಾಜೆ ಗ್ರಾಮದ ಶೀಟ್ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮೇ 30) ಮಧ್ಯಾಹ್ನ ನಡೆದಿದೆ.

ಮುಡಿಪುವಿನಿಂದ  ಕುಟುಂಬವೊಂದು  ಜಾವಗಲ್ ಗೆ   ತೆರಳುತಿದ್ದ  ಮಿನಿ ಬಸ್ಸಿಗೆ ಮುಂಡಾಜೆ  ಶೀಟ್ ಎಂಬಲ್ಲಿ  ಚಿಕ್ಕಮಗಳೂರು ಕಡೆಯಿಂದ ಉಜಿರೆ ಕಡೆ ಹೋಗುತಿದ್ದ ಸರಕು  ಸಾಗಾಟದ ಕಂಟೈನರ್ ಲಾರಿ  ಕಡೂರಿನಿಂದ ಧರ್ಮಸ್ಥಳಕ್ಕೆ ಬರುತಿದ್ದ ಕೆ ಎಸ್ ಆರ್ ಟಿ. ಸಿ. ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಮಿನಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಚಾಲಕ ಸ್ಥಳದಲ್ಲಿ ನಿಲ್ಲಿಸದೇ ಲಾರಿ ಸಹಿತ  ತಪ್ಪಿಸಿಕೊಂಡು ಬಂದಿದ್ದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಬಳಿ ಸಾರ್ವಜನಿಕರು ಲಾರಿಯನ್ನು ಅಡ್ಡ ಹಾಕಿದ್ದಾರೆ. ಮಿನಿ ಬಸ್ಸಿನ ಚಾಲಕ ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿ ಓವರ್ ಟೇಕ್ ಮಾಡುವ ವೇಳೆ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಬಸ್ಸನ್ನು ತೀರ ರಸ್ತೆ  ಬದಿಗೆ ಕೊಂಡೋಗಿದ್ದು ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದರೆ ಲಾರಿಯು ಮಿನಿ ಬಸ್ಸಿಗೆ ನೇರವಾಗಿ ಮುಖಾಮುಖಿ  ಡಿಕ್ಕಿ ಹೊಡೆಯುತಿದ್ದು ಬಸ್ ಚಾಲಕನ ಸಮಯ ಪ್ರಜ್ಞೆ ಯಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ  ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Related posts

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಗುರುವಾಯನಕೆರೆ- ವೇಣೂರು ರಸ್ತೆಯ ಅಲ್ಲಲ್ಲಿ ಹೊಂಡಗಳು ಸೃಷ್ಟಿ, ವಾಹನ ಸವಾರರ ಪರದಾಟ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya
error: Content is protected !!