28.8 C
ಪುತ್ತೂರು, ಬೆಳ್ತಂಗಡಿ
September 2, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

ಶಿಶಿಲ: ಮತ್ಸ್ಯ ತೀರ್ಥ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಕಿಡಿಗೇಡಿಗಳು ಕಾಪರ್ ಸಲ್ಫೇಟ್ (ಮೈಲುತುತ್ತು) ಬಳಸಿ ಮೀನು ಹಿಡಿಯಲು ಯತ್ನಿಸಿದ ಪರಿಣಾಮ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ರಾತ್ರಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ನದಿ ತೀರದಲ್ಲಿ ಸಂಚರಿಸುವ ವೇಳೆ ಸತ್ತು ಬಿದ್ದ ಹಾಗೂ ತೇಲುತ್ತಿದ್ದ ಮೀನುಗಳನ್ನು ಗಮನಿಸಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ.

ಮೀನು ಹಿಡಿಯಲು ಬಳಸಿದ ವಿಷಕಾರಿ ರಾಸಾಯನಿಕದ ಪರಿಣಾಮವಾಗಿ ಸಣ್ಣಪುಟ್ಟ ಮೀನುಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದು ಅವುಗಳನ್ನು ಅಲ್ಲಿಯೇ ಬಿಟ್ಟು ಹೋಗಿರುವುದು ಕಂಡುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪ್ರಮುಖರಾದ ಕರುಣಾಕರ ಶಿಶಿಲ, ಮನೋಜ್, ಉಮೇಶ್, ಲೋಕೇಶ್ ಅಡ್ಡಹಳ್ಳ ಹಾಗೂ ಪುರುಷೋತ್ತಮ್ ಅಡ್ಡಹಳ್ಳ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮೀನುಗಾರಿಕಾ ಇಲಾಖೆಗೆ ಮಾಹಿತಿ ನೀಡಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ. ಶಿಶಿಲೇಶ್ವರ ದೇವಸ್ಥಾನದ ಸುತ್ತಮುತ್ತ ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೀನುಗಾರಿಕೆಗೆ ಅವಕಾಶವಿಲ್ಲ.

ಈ ಹಿಂದೆ ಇದೇ ಪ್ರದೇಶದಲ್ಲಿ ನಡೆದಿದ್ದ ಮೀನುಗಳ ಮಾರಣಹೋಮದ ಘಟನೆ ಜನರ ಮನಸ್ಸಿನಲ್ಲಿ ಇನ್ನೂ ಹಸಿರಾಗಿರುವಾಗ ಮತ್ತೊಮ್ಮೆ ಇಂತಹ ದುರ್ಘಟನೆ ಸಂಭವಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಪರಿಸರ ಹಾಗೂ ಜಲಚರ ಜೀವಸಂಕುಲಕ್ಕೆ ಹಾನಿಯುಂಟುಮಾಡುವ ಇಂತಹ ಕೃತ್ಯಗಳನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆ ತಕ್ಷಣ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ದುಷ್ಕರ್ಮಿಗಳ ಕೃತ್ಯಕ್ಕೆ ಖಂಡನೆ:
ಹಲವಾರು ಬಾರಿ ದೇವರ ಮೀನುಗಳಿಗೆ ಈ ರೀತಿಯ ನಿರಂತರ ದಾಳಿಗಳು ಮುಂದುವರಿಯುತ್ತಿರುವುದು ಆತಂಕದ ವಿಚಾರ. ಗ್ರಾಮದಲ್ಲಿ‌ ಭಕ್ತಾಧಿಗಳಲ್ಲಿ ಇನ್ನೂ ಜಾಗೃತಿ ಮೂಡಿಸುವ ಅಗತ್ಯವಿದೆ. ಮುಜರಾಯಿ ಇಲಾಖೆ, ಮೀನುಗಾರಿಕೆ ಇಲಾಖೆ ದೇವರ ಮೀನುಗಳ ಕುರಿತು ಬೇಜವಾಬ್ದಾರಿ ವರ್ತನೆ ಸಲ್ಲದು. ಈ ಕುರಿತು ಕರಪತ್ರ, ಸೂಚನಾ ಫಲಕ, ಭಕ್ತಾಧಿಗಳ ಸಭೆ ಮೊದಲಾದುವುದನ್ನು ನಿರಂತರ ಮಾಡುತ್ತಿರಬೇಕು. ಇಲ್ಲದಿದ್ದಲ್ಲಿ ಮುಂದೆ ಹಿಂದೂ ಸಂಘಟನೆ ತೀರ ಪ್ರತಿಭಟನೆ ಮಾಡುವುದು ಅನಿವಾರ್ಯವಾದೀತು ಎಂದು ಜಿಲ್ಲಾ ಧರ್ಮ ಪ್ರಸಾರ ಪ್ರಮುಖರಾದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯರು ತಿಳಿಸಿದ್ದಾರೆ.

ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ:
ಶಿಶಿಲದಲ್ಲಿ ಮೀನುಗಳ ಮಾರಣಹೋಮ ಆಗಿರುವುದು ತುಂಬಾನೇ ಬೇಸರ ತಂದಿದೆ. ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರಗಿಸಿ ಮುಂದೆ ಈ ರೀತಿಯ ಕೃತ್ಯಗಳು ನಡೆಯದಂತೆ ಕ್ರಮವಹಿಸಬೇಕು ಎಂದು ರಾಧಾಕೃಷ್ಣ ಗೌಡ ಗುತ್ತು ಶಿಶಿಲ ತಿಳಿಸಿದ್ದಾರೆ.

Related posts

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya
error: Content is protected !!