24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ಪ್ರಾರಂಭೋತ್ಸವದ ಸಂಭ್ರಮದ ಜೊತೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಸಮುದಾಯ ಸಂಪರ್ಕ ಮತ್ತು ಮಾಧ್ಯಮ ವಿಭಾಗದ ನಿರ್ದೇಶಕ ಪ್ರದೀಪ್ ಶೆಟ್ಟಿ ಮಾತನಾಡುತ್ತಾ ಧರ್ಮಸ್ಥಳದ ಮಹತ್ವ, ಧರ್ಮಸ್ಥಳದ ವಿದ್ಯಾಸಂಸ್ಥೆಗಳು ಹಾಗೂ ಚತುರ್ವಿಧ ದಾನ, ಬದಲಾಗುತ್ತಿರುವ ಶಿಕ್ಷಣ ಪದ್ಧತಿ ಹೆತ್ತವರ ನಿರೀಕ್ಷೆಗಳು ಜೊತೆಗೆ ಹೆತ್ತವರ ಕರ್ತವ್ಯಗಳು ಶಿಕ್ಷಣದ ಜೊತೆಗೆ ಸಂಸ್ಕಾರ ನಾಳೆಗಳ ಮರೆತು ಭರವಸೆ ಜೀವನ ಎಂಬಂತೆ ಬದುಕುವ ರೀತಿ ಹತ್ತು ಹಲವು ವಿಚಾರಗಳನ್ನು ಹೆತ್ತವರಿಗೆ ತಿಳಿಯಪಡಿಸಿದರು. ಬಳಿಕ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಸ್ತುತ ಶೈಕ್ಷಣಿಕ ವರ್ಷದ ರೂಪುರೇಷೆಗಳ ಕುರಿತು ಹೆತ್ತವರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ ನಿರ್ವಹಿಸಿದರು. ವಿದ್ಯಾರ್ಥಿಗಳ ಹೆತ್ತವರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya
error: Content is protected !!