29.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ಪ್ರಾರಂಭೋತ್ಸವದ ಸಂಭ್ರಮದ ಜೊತೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಸಮುದಾಯ ಸಂಪರ್ಕ ಮತ್ತು ಮಾಧ್ಯಮ ವಿಭಾಗದ ನಿರ್ದೇಶಕ ಪ್ರದೀಪ್ ಶೆಟ್ಟಿ ಮಾತನಾಡುತ್ತಾ ಧರ್ಮಸ್ಥಳದ ಮಹತ್ವ, ಧರ್ಮಸ್ಥಳದ ವಿದ್ಯಾಸಂಸ್ಥೆಗಳು ಹಾಗೂ ಚತುರ್ವಿಧ ದಾನ, ಬದಲಾಗುತ್ತಿರುವ ಶಿಕ್ಷಣ ಪದ್ಧತಿ ಹೆತ್ತವರ ನಿರೀಕ್ಷೆಗಳು ಜೊತೆಗೆ ಹೆತ್ತವರ ಕರ್ತವ್ಯಗಳು ಶಿಕ್ಷಣದ ಜೊತೆಗೆ ಸಂಸ್ಕಾರ ನಾಳೆಗಳ ಮರೆತು ಭರವಸೆ ಜೀವನ ಎಂಬಂತೆ ಬದುಕುವ ರೀತಿ ಹತ್ತು ಹಲವು ವಿಚಾರಗಳನ್ನು ಹೆತ್ತವರಿಗೆ ತಿಳಿಯಪಡಿಸಿದರು. ಬಳಿಕ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಸ್ತುತ ಶೈಕ್ಷಣಿಕ ವರ್ಷದ ರೂಪುರೇಷೆಗಳ ಕುರಿತು ಹೆತ್ತವರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ ನಿರ್ವಹಿಸಿದರು. ವಿದ್ಯಾರ್ಥಿಗಳ ಹೆತ್ತವರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Related posts

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ಉಜಿರೆ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಉಜಿರೆಯ ಅನುಗ್ರಹ ಆಂ.ಮಾ. ಶಿಕ್ಷಣ ಸಂಸ್ಥೆಗೆ ಹಲವು ಪ್ರಶಸ್ತಿಗಳು

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!