23.9 C
ಪುತ್ತೂರು, ಬೆಳ್ತಂಗಡಿ
September 2, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: 2025- 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರ ಫಲಿತಾಂಶದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ಅವರು 625 ಅಂಕಗಳಿಗೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಅಪೂರ್ವ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿನಿಯ ಈ ಅತ್ಯುನ್ನತ ಸಾಧನೆಯು ಶಾಲೆಗೆ, ಉಜಿರೆ ಪ್ರದೇಶಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ಗರಿ ಮೂಡಿಸಿದೆ. ಉಜಿರೆಯ ಸೂರ್ಯ ನಿವಾಸಿಗಳಾದ ಹರ್ಷೇಂದ್ರ ಕುಮಾರ್ ಹಾಗೂ ಶಾರದಾ ದಂಪತಿಗಳ ಪುತ್ರಿಯಾಗಿರುವ ಅನನ್ಯ, ತಮ್ಮ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ, ಪ್ರತಿಭೆ ಹಾಗೂ ಶಿಕ್ಷಕರ ಸಮರ್ಪಕ ಮಾರ್ಗದರ್ಶನದ ಮೂಲಕ ಈ ಅಮೋಘ ಸಾಧನೆಯನ್ನು ದಾಖಲಿಸಿದ್ದಾರೆ.

ಅನನ್ಯ ಅವರ ಅಣ್ಣ ಕೌಸ್ತು ಕೂಡ ಇದೇ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಕುಟುಂಬದ ಶೈಕ್ಷಣಿಕ ಪರಂಪರೆ ಹಾಗೂ ಪ್ರೋತ್ಸಾಹವೂ ಅನನ್ಯ ಅವರ ಯಶಸ್ಸಿಗೆ ಬಲವಾದ ಅಡಿಪಾಯವಾಗಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕ ವೃಂದ, ಆಡಳಿತ ಮಂಡಳಿಯ ಸದಸ್ಯರು, ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಅನನ್ಯ ಅವರ ಮುಂದಿನ ವಿದ್ಯಾಭ್ಯಾಸವು ಇನ್ನಷ್ಟು ಯಶಸ್ವಿಯಾಗಿ ಸಾಗಲಿ ಹಾಗೂ ಭವಿಷ್ಯದಲ್ಲಿ ಇನ್ನೂ ಉನ್ನತ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಕಳಿಯ ಗ್ರಾ.ಪಂ.ನಲ್ಲಿ ಮೆಸ್ಕಾಂನಿಂದ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯಕ್ರಮ

Suddi Udaya
error: Content is protected !!