28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಬೆಳ್ತಂಗಡಿ: ಸರಕು ಸಾಗಾಟದ ಕಂಟೈನರ್ ಲಾರಿಯೊಂದು ಮಿನಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಮುಂಡಾಜೆ ಗ್ರಾಮದ ಶೀಟ್ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮೇ 30) ಮಧ್ಯಾಹ್ನ ನಡೆದಿದೆ.

ಮುಡಿಪುವಿನಿಂದ  ಕುಟುಂಬವೊಂದು  ಜಾವಗಲ್ ಗೆ   ತೆರಳುತಿದ್ದ  ಮಿನಿ ಬಸ್ಸಿಗೆ ಮುಂಡಾಜೆ  ಶೀಟ್ ಎಂಬಲ್ಲಿ  ಚಿಕ್ಕಮಗಳೂರು ಕಡೆಯಿಂದ ಉಜಿರೆ ಕಡೆ ಹೋಗುತಿದ್ದ ಸರಕು  ಸಾಗಾಟದ ಕಂಟೈನರ್ ಲಾರಿ  ಕಡೂರಿನಿಂದ ಧರ್ಮಸ್ಥಳಕ್ಕೆ ಬರುತಿದ್ದ ಕೆ ಎಸ್ ಆರ್ ಟಿ. ಸಿ. ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಮಿನಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಚಾಲಕ ಸ್ಥಳದಲ್ಲಿ ನಿಲ್ಲಿಸದೇ ಲಾರಿ ಸಹಿತ  ತಪ್ಪಿಸಿಕೊಂಡು ಬಂದಿದ್ದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಬಳಿ ಸಾರ್ವಜನಿಕರು ಲಾರಿಯನ್ನು ಅಡ್ಡ ಹಾಕಿದ್ದಾರೆ. ಮಿನಿ ಬಸ್ಸಿನ ಚಾಲಕ ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿ ಓವರ್ ಟೇಕ್ ಮಾಡುವ ವೇಳೆ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಬಸ್ಸನ್ನು ತೀರ ರಸ್ತೆ  ಬದಿಗೆ ಕೊಂಡೋಗಿದ್ದು ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದರೆ ಲಾರಿಯು ಮಿನಿ ಬಸ್ಸಿಗೆ ನೇರವಾಗಿ ಮುಖಾಮುಖಿ  ಡಿಕ್ಕಿ ಹೊಡೆಯುತಿದ್ದು ಬಸ್ ಚಾಲಕನ ಸಮಯ ಪ್ರಜ್ಞೆ ಯಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ  ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Related posts

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ವಾಣಿಯಲ್ಲಿ ‘ಆರ್ಮ್ಡ್ ಫೋರ್ಸ್‌ನಲ್ಲಿ ವೃತ್ತಿ’ ಕುರಿತು ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!