ಬೆಳ್ತಂಗಡಿ: ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್ ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಬೋಜನಾಲಯದ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದರು.
ಈ ವೇಳೆ, ಡಾ.ಹೇಮಾವತಿ ವೀ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ ಸುರೇಂದ್ರ ಕುಮಾರ್ ಮತ್ತು ಕುಟುಂಬಸ್ಥರು ಜೊತೆಗಿದ್ದರು.ದೇವರ ದರ್ಶನದ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಂಸದ ಕ್ಯಾ.ಬ್ರಿಜೇಶ್ ಚೌಟ,ರಾಜ್ಯಸಭೆಯ ಕಾರ್ಯದರ್ಶಿ ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಜೊತೆಗಿದ್ದರು.












