24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಪ್ರಯುಕ್ತ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಮೂಡಬಿದ್ರೆ ಶಿವಾನಂದ ಶಾಂತಿಯವರ ಪೌರೋಹಿತ್ಯದಲ್ಲಿ ಮೇ 27ರಂದು ಧೂಮಾವತಿ ಮತ್ತು ದೇಯೀ ಬೈದೆದಿ ಸನ್ನಿಧಿಯಲ್ಲಿ ಗೆಜ್ಜೆ ಸೇವೆ ಮಾಡಿ ಶ್ರೀ ದೇಯಿ ಬೈದೆದಿ ಹಾಗೂ ಆದಿ ದೂಮಾವತಿಗೆ ಮಹಾ ಮಂಗಳಾರತಿ ಮಾಡುವುದರೊಂದಿಗೆ ಶ್ರೀ ಗೆಜ್ಜೆಗಿರಿ ಮೇಳದ ತಿರುಗಾಟಕ್ಕೆ ಮಂಗಳವನ್ನು ಹಾಡಲಾಯಿತು.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದರನ್ನು ಮೇಳದ ಪ್ರಧಾನ ಸಂಚಾಲಕರಾದ ಪ್ರಮಲ್ ಕುಮಾರ್ ಕಾರ್ಕಳ ರವರ ನೇತೃತ್ವದಲ್ಲಿ ಗೌರವಿಸಲಾಯಿತು ಕ್ಷೇತ್ರದಲ್ಲಿ ನಡೆಯುತ್ತಿರುವ ದೇಯೀ ಬೈದೆತಿ ಆಯುರ್ವೇದ ಕೇಂದ್ರದ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿದ್ದು ಕ್ಷೇತ್ರದ ಭಕ್ತರು ಹೆಚ್ಚಿನ ಧನಸಹಾಯವನ್ನು ನೀಡಬೇಕೆಂದು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ ಬಿರುವ ರವರು ಮನವಿ ಮಾಡಿದರು.

ರವಿ ಪೂಜಾರಿ ಚಿಲಿಂಬಿ ರವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿಯ ಸಭೆ ಜರಗಿದ್ದು ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ ಬಿ ಸ್ವಾಗತಿಸಿ ವರದಿಯನ್ನು ವಾಚಿಸಿದರು. ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವ ಮಾರ್ಗದರ್ಶಕರಾಗಿ ಗುಜರಾತ್ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರೂ ಉದ್ಯಮಿಗಳೂ ಆಗಿರುವ ಶ್ರೀ ದಯಾನಂದ ಬೊಂಟ್ರಾ, ಹಾಗೂ ಮಹಾರಾಷ್ಟ್ರದ ನಾಸಿಕದ ಉದ್ಯಮಿಗಳಾಗಿರುವ ಶ್ರೀ ಗಂಗಾಧರ ಅಮೀನ್ ರವರನ್ನು ಗೌರವ ಮಾರ್ಗದರ್ಶಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ಗಲ್ಫ್ ರಾಷ್ಟ್ರಗಳ ಸಂಚಾಲಕರೂ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿರುವ ಶ್ರೀ ಸತೀಶ್ ಪೂಜಾರಿ ಬೆಳಪು,ಶ್ರೀ ಉಲ್ಲಾಸ್ ಕೋಟ್ಯಾನ್, ಶ್ರೀ ದೀಪಕ್ ಕೋಟ್ಯಾನ್, ಶ್ರೀ ಹರೀಶ್ ಸಾಲಿಯಾನ್ ಬಜಗೋಳಿ, ಶ್ರೀ ಜಯಾನಂದ ಎಂ, ಶ್ರೀ ನಿತ್ಯಾನಂದ ನಾವರ, ಡಾ ಸಂತೋಷ್ ಕುಮಾರ್ ಬೈರಂಪಲ್ಲಿ, ಶ್ರೀ ನಾರಾಯಣ ಮಚ್ಚಿನ, ಶ್ರೀ ರಾಜೇಂದ್ರ ಚಿಲಿಂಬಿ, ಹರೀಶ್ ಪೂಜಾರಿ ಬೈಲಬರಿ, ಶ್ರೀ ನಾಗೇಶ್ ಪೂಜಾರಿ ಬೈಕಂಪಾಡಿ, ಶ್ರೀ ನವೀನ ಸುವರ್ಣ ಸಜೀಪ, ಶ್ರೀ ಜಯರಾಮ್ ಬೆಳುವಾಯಿ, ವಿಜಯ ಪೂಜಾರಿ ಸುರತ್ಕಲ್ ಹಾಗೂ ಗೆಜ್ಜೆ ಗಿರಿ ಮೇಳದ ಕಲಾವಿದರು ಹಾಜರಿದ್ದರು.

Related posts

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya
error: Content is protected !!