23.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಪ್ರಯುಕ್ತ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಮೂಡಬಿದ್ರೆ ಶಿವಾನಂದ ಶಾಂತಿಯವರ ಪೌರೋಹಿತ್ಯದಲ್ಲಿ ಮೇ 27ರಂದು ಧೂಮಾವತಿ ಮತ್ತು ದೇಯೀ ಬೈದೆದಿ ಸನ್ನಿಧಿಯಲ್ಲಿ ಗೆಜ್ಜೆ ಸೇವೆ ಮಾಡಿ ಶ್ರೀ ದೇಯಿ ಬೈದೆದಿ ಹಾಗೂ ಆದಿ ದೂಮಾವತಿಗೆ ಮಹಾ ಮಂಗಳಾರತಿ ಮಾಡುವುದರೊಂದಿಗೆ ಶ್ರೀ ಗೆಜ್ಜೆಗಿರಿ ಮೇಳದ ತಿರುಗಾಟಕ್ಕೆ ಮಂಗಳವನ್ನು ಹಾಡಲಾಯಿತು.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದರನ್ನು ಮೇಳದ ಪ್ರಧಾನ ಸಂಚಾಲಕರಾದ ಪ್ರಮಲ್ ಕುಮಾರ್ ಕಾರ್ಕಳ ರವರ ನೇತೃತ್ವದಲ್ಲಿ ಗೌರವಿಸಲಾಯಿತು ಕ್ಷೇತ್ರದಲ್ಲಿ ನಡೆಯುತ್ತಿರುವ ದೇಯೀ ಬೈದೆತಿ ಆಯುರ್ವೇದ ಕೇಂದ್ರದ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿದ್ದು ಕ್ಷೇತ್ರದ ಭಕ್ತರು ಹೆಚ್ಚಿನ ಧನಸಹಾಯವನ್ನು ನೀಡಬೇಕೆಂದು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ ಬಿರುವ ರವರು ಮನವಿ ಮಾಡಿದರು.

ರವಿ ಪೂಜಾರಿ ಚಿಲಿಂಬಿ ರವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿಯ ಸಭೆ ಜರಗಿದ್ದು ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ ಬಿ ಸ್ವಾಗತಿಸಿ ವರದಿಯನ್ನು ವಾಚಿಸಿದರು. ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವ ಮಾರ್ಗದರ್ಶಕರಾಗಿ ಗುಜರಾತ್ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರೂ ಉದ್ಯಮಿಗಳೂ ಆಗಿರುವ ಶ್ರೀ ದಯಾನಂದ ಬೊಂಟ್ರಾ, ಹಾಗೂ ಮಹಾರಾಷ್ಟ್ರದ ನಾಸಿಕದ ಉದ್ಯಮಿಗಳಾಗಿರುವ ಶ್ರೀ ಗಂಗಾಧರ ಅಮೀನ್ ರವರನ್ನು ಗೌರವ ಮಾರ್ಗದರ್ಶಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ಗಲ್ಫ್ ರಾಷ್ಟ್ರಗಳ ಸಂಚಾಲಕರೂ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿರುವ ಶ್ರೀ ಸತೀಶ್ ಪೂಜಾರಿ ಬೆಳಪು,ಶ್ರೀ ಉಲ್ಲಾಸ್ ಕೋಟ್ಯಾನ್, ಶ್ರೀ ದೀಪಕ್ ಕೋಟ್ಯಾನ್, ಶ್ರೀ ಹರೀಶ್ ಸಾಲಿಯಾನ್ ಬಜಗೋಳಿ, ಶ್ರೀ ಜಯಾನಂದ ಎಂ, ಶ್ರೀ ನಿತ್ಯಾನಂದ ನಾವರ, ಡಾ ಸಂತೋಷ್ ಕುಮಾರ್ ಬೈರಂಪಲ್ಲಿ, ಶ್ರೀ ನಾರಾಯಣ ಮಚ್ಚಿನ, ಶ್ರೀ ರಾಜೇಂದ್ರ ಚಿಲಿಂಬಿ, ಹರೀಶ್ ಪೂಜಾರಿ ಬೈಲಬರಿ, ಶ್ರೀ ನಾಗೇಶ್ ಪೂಜಾರಿ ಬೈಕಂಪಾಡಿ, ಶ್ರೀ ನವೀನ ಸುವರ್ಣ ಸಜೀಪ, ಶ್ರೀ ಜಯರಾಮ್ ಬೆಳುವಾಯಿ, ವಿಜಯ ಪೂಜಾರಿ ಸುರತ್ಕಲ್ ಹಾಗೂ ಗೆಜ್ಜೆ ಗಿರಿ ಮೇಳದ ಕಲಾವಿದರು ಹಾಜರಿದ್ದರು.

Related posts

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

Suddi Udaya
error: Content is protected !!