24.2 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾಗಿ ಮೇ 31ಕ್ಕೆ ವಯೋನಿವೃತ್ತಿಗೊಂಡ ಈಶ್ವರಿ ಕೆ ಅವರ ಬೀಳ್ಕೊಡುಗೆ ಸಮಾರಂಭವು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು .

ಈಶ್ವರಿ ಕೆ ಇವರು ತಮ್ಮ ವೃತ್ತಿಜೀವನದ ಅನುಭವ ಮತ್ತು ಹಾಗೂ ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸಿದರು.

ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ್ಞ , ಸಹಕಾರ ಭಾರತಿಯ ತಾಲೂಕು ಮಾಜಿ ಅಧ್ಯಕ್ಷ ರಾಜೇಶ್ ಪೆರ್ಮುಡ, . ನಾಳ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೇಶವ ಪೂಜಾರಿ ಉಪಸ್ಥಿತರಿದ್ದು ನಿವೃತ್ತರನ್ನು ಗೌರವಿಸಿದರು . ಕಳಿಯ ಗ್ರಾಮ ಪಂಚಾಯತ್ , ಪದವಿಪೂರ್ವ ಕಾಲೇಜು ಹಾಗೂ ಅಕ್ಷರ ದಾಸೋಹದ ಸಿಬ್ಬಂದಿಗಳು ನೆನಪಿನ ಕಾಣಿಕೆಯನ್ನು ನೀಡಿದರು.

ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಹಮ್ಮದ್ ರಿಯಾಜ್ ನೇತೃತ್ವದಲ್ಲಿ ಸಹ ಶಿಕ್ಷಕರ ಸಂಘ ಬೆಳ್ತಂಗಡಿ ಇದರ ತಾಲೂಕು ಘಟಕದ ವತಿಯಿಂದ ನಿವೃತ್ತರನ್ನು ಸನ್ಮಾನಿಸಲಾಯಿತು .

ಜ್ಯೋತಿ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಸನ್ಮಾನ ಪತ್ರ ವಾಚಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿ ರಮ್ಯಾ ವಂದಿಸಿದರು.

Related posts

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya

12 ವರ್ಷಗಳ ಮೋದಿ ನೇತೃತ್ವ – ಹೊಸ ಭಾರತದ ಆತ್ಮವಿಶ್ವಾಸದ ಪಯಣ: ಅನಿಲ್ ಕುಮಾರ್ ಯು

Suddi Udaya
error: Content is protected !!