September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೀತಾಂಬರ ಹೇರಾಜೆಯವರ ಮನೆಯಲ್ಲಿ ರೋಟರಿ ಕ್ಲಬ್ ಕುಟುಂಬೋತ್ಸವ

ಬೆಳ್ತಂಗಡಿ ರೋಟರಿ ಕ್ಲಬ್ ನ ಮಾಜಿ ಸದಸ್ಯ ನಿವೃತ್ತ ಎಸ್ ಪಿ ಪೀತಾಂಬರ್ ಹೇರಾಜೆಯವರು ಬೆಳ್ತಂಗಡಿ ರೋಟರಿ ಕ್ಲಬ್ಬಿನ ಕುಟುಂಬದ ಸರ್ವ ಸದಸ್ಯರನ್ನೂ ತಮ್ಮ ಮನೆಗೆ ಆಹ್ವಾನಿಸಿ ಕುಟುಂಬೋತ್ಸವ ನಡೆಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಒಂದು ವಿಶೇಷವಾದ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿ ಕೊಂಡಿತ್ತು. ಇದರ ನಿರ್ವಹಣೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಡಾ ಪ್ರಕಾಶ ಪ್ರಭು, ಪತ್ನಿ ಗೀತಾ ಪ್ರಕಾಶ ಪ್ರಭು ಹಾಗೂ ಕಾರ್ಯದರ್ಶಿ ಡಾ ಎಂ ದಯಾಕರರು ಮಾಡಿದರು. ಈ ಮನರಂಜನಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಪ್ರತಾಪ ಸಿಂಹ ನಾಯಕ್ ಮತ್ತು ಜ್ಯೋತಿ ನಾಯಕ್ ದಂಪತಿಗಳು , ಡಾ ರಮೇಶ್ ಮತ್ತು ಡಾ. ಹೇಮಲತಾ ದಂಪತಿ, ಡಾ ಶ್ರೀಕೃಷ್ಣ ಮತ್ತು ಸುಮಂಗಲ ದಂಪತಿ, ಡಾ ಶಶಿಧರ ಡೋಂಗ್ರೆ ಮತ್ತು ಡಾ ಸುಷ್ಮಾ ಡೋಂಗ್ರೆ ದಂಪತಿ ಭಾಗವಹಿಸಿದ್ದರು. ಮಕ್ಕಳಿಗೆ ಸ್ಮರಣ ಶಕ್ತಿ ಸ್ಪರ್ಧೆ ಹಾಗೂ ಪ್ರೇಕ್ಷಕರಿಗೆ ವಿಶೇಷವಾದ ಕರೋಕೆ ಹಾಡು ಗುರುತಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಕೀರ್ತಿಶೇಷ ಡಾ. ಬಿ ಯಶೋವರ್ಮ ಅವರ ಪತ್ನಿ ಸೋನಿಯಾ ವರ್ಮಾ ಉಪಸ್ಥಿತಿಯಲ್ಲಿ ಪೂರಣ್ ವರ್ಮ ಅವರನ್ನು ಪೀತಾಂಬರ ಹೇರಾಜೆ ದಂಪತಿ ಗೌರವಿಸಿದರು. ಈ ಆತಿಥ್ಯ ನೀಡಿದ್ದಕ್ಕಾಗಿ ಪೀತಾಂಬರ ಹೇರಾಜೆ ದಂಪತಿಯನ್ನು ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು.
ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಪೀತಾಂಬರ ಹೇರಾಜೆಯವರು ಮಾತನಾಡಿ, ತಮ್ಮ ಮತ್ತು ರೋಟರಿ ಕುಟುಂಬದ ಸಂಬಂಧ ಮತ್ತು ಪ್ರೀತಿಯನ್ನು ವ್ಯಕ್ತ ಪಡಿಸಿದರು ಮತ್ತು ಅಧ್ಯಕ್ಷ ಡಾ ಪ್ರಕಾಶ ಪ್ರಭುರವರನ್ನು ಸನ್ಮಾನಿಸಿದರು. ಡಾ ಎಂ ಎಂ ದಯಾಕರ್ ಧನ್ಯವಾದ ನೀಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಿ. ವಿಜಯ ಕುಮಾರ್ ಗೆ ಕರ್ನಾಟಕದ ಡಿಜಿ ಮತ್ತು ಐಜಿಪಿ ರವರ ಪ್ರಶಂಸ ಪದಕ ಪ್ರದಾನ

Suddi Udaya
error: Content is protected !!