July 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೀತಾಂಬರ ಹೇರಾಜೆಯವರ ಮನೆಯಲ್ಲಿ ರೋಟರಿ ಕ್ಲಬ್ ಕುಟುಂಬೋತ್ಸವ

ಬೆಳ್ತಂಗಡಿ ರೋಟರಿ ಕ್ಲಬ್ ನ ಮಾಜಿ ಸದಸ್ಯ ನಿವೃತ್ತ ಎಸ್ ಪಿ ಪೀತಾಂಬರ್ ಹೇರಾಜೆಯವರು ಬೆಳ್ತಂಗಡಿ ರೋಟರಿ ಕ್ಲಬ್ಬಿನ ಕುಟುಂಬದ ಸರ್ವ ಸದಸ್ಯರನ್ನೂ ತಮ್ಮ ಮನೆಗೆ ಆಹ್ವಾನಿಸಿ ಕುಟುಂಬೋತ್ಸವ ನಡೆಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಒಂದು ವಿಶೇಷವಾದ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿ ಕೊಂಡಿತ್ತು. ಇದರ ನಿರ್ವಹಣೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಡಾ ಪ್ರಕಾಶ ಪ್ರಭು, ಪತ್ನಿ ಗೀತಾ ಪ್ರಕಾಶ ಪ್ರಭು ಹಾಗೂ ಕಾರ್ಯದರ್ಶಿ ಡಾ ಎಂ ದಯಾಕರರು ಮಾಡಿದರು. ಈ ಮನರಂಜನಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಪ್ರತಾಪ ಸಿಂಹ ನಾಯಕ್ ಮತ್ತು ಜ್ಯೋತಿ ನಾಯಕ್ ದಂಪತಿಗಳು , ಡಾ ರಮೇಶ್ ಮತ್ತು ಡಾ. ಹೇಮಲತಾ ದಂಪತಿ, ಡಾ ಶ್ರೀಕೃಷ್ಣ ಮತ್ತು ಸುಮಂಗಲ ದಂಪತಿ, ಡಾ ಶಶಿಧರ ಡೋಂಗ್ರೆ ಮತ್ತು ಡಾ ಸುಷ್ಮಾ ಡೋಂಗ್ರೆ ದಂಪತಿ ಭಾಗವಹಿಸಿದ್ದರು. ಮಕ್ಕಳಿಗೆ ಸ್ಮರಣ ಶಕ್ತಿ ಸ್ಪರ್ಧೆ ಹಾಗೂ ಪ್ರೇಕ್ಷಕರಿಗೆ ವಿಶೇಷವಾದ ಕರೋಕೆ ಹಾಡು ಗುರುತಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಕೀರ್ತಿಶೇಷ ಡಾ. ಬಿ ಯಶೋವರ್ಮ ಅವರ ಪತ್ನಿ ಸೋನಿಯಾ ವರ್ಮಾ ಉಪಸ್ಥಿತಿಯಲ್ಲಿ ಪೂರಣ್ ವರ್ಮ ಅವರನ್ನು ಪೀತಾಂಬರ ಹೇರಾಜೆ ದಂಪತಿ ಗೌರವಿಸಿದರು. ಈ ಆತಿಥ್ಯ ನೀಡಿದ್ದಕ್ಕಾಗಿ ಪೀತಾಂಬರ ಹೇರಾಜೆ ದಂಪತಿಯನ್ನು ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು.
ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಪೀತಾಂಬರ ಹೇರಾಜೆಯವರು ಮಾತನಾಡಿ, ತಮ್ಮ ಮತ್ತು ರೋಟರಿ ಕುಟುಂಬದ ಸಂಬಂಧ ಮತ್ತು ಪ್ರೀತಿಯನ್ನು ವ್ಯಕ್ತ ಪಡಿಸಿದರು ಮತ್ತು ಅಧ್ಯಕ್ಷ ಡಾ ಪ್ರಕಾಶ ಪ್ರಭುರವರನ್ನು ಸನ್ಮಾನಿಸಿದರು. ಡಾ ಎಂ ಎಂ ದಯಾಕರ್ ಧನ್ಯವಾದ ನೀಡಿದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya
error: Content is protected !!