26.5 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೀತಾಂಬರ ಹೇರಾಜೆಯವರ ಮನೆಯಲ್ಲಿ ರೋಟರಿ ಕ್ಲಬ್ ಕುಟುಂಬೋತ್ಸವ

ಬೆಳ್ತಂಗಡಿ ರೋಟರಿ ಕ್ಲಬ್ ನ ಮಾಜಿ ಸದಸ್ಯ ನಿವೃತ್ತ ಎಸ್ ಪಿ ಪೀತಾಂಬರ್ ಹೇರಾಜೆಯವರು ಬೆಳ್ತಂಗಡಿ ರೋಟರಿ ಕ್ಲಬ್ಬಿನ ಕುಟುಂಬದ ಸರ್ವ ಸದಸ್ಯರನ್ನೂ ತಮ್ಮ ಮನೆಗೆ ಆಹ್ವಾನಿಸಿ ಕುಟುಂಬೋತ್ಸವ ನಡೆಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಒಂದು ವಿಶೇಷವಾದ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿ ಕೊಂಡಿತ್ತು. ಇದರ ನಿರ್ವಹಣೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಡಾ ಪ್ರಕಾಶ ಪ್ರಭು, ಪತ್ನಿ ಗೀತಾ ಪ್ರಕಾಶ ಪ್ರಭು ಹಾಗೂ ಕಾರ್ಯದರ್ಶಿ ಡಾ ಎಂ ದಯಾಕರರು ಮಾಡಿದರು. ಈ ಮನರಂಜನಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಪ್ರತಾಪ ಸಿಂಹ ನಾಯಕ್ ಮತ್ತು ಜ್ಯೋತಿ ನಾಯಕ್ ದಂಪತಿಗಳು , ಡಾ ರಮೇಶ್ ಮತ್ತು ಡಾ. ಹೇಮಲತಾ ದಂಪತಿ, ಡಾ ಶ್ರೀಕೃಷ್ಣ ಮತ್ತು ಸುಮಂಗಲ ದಂಪತಿ, ಡಾ ಶಶಿಧರ ಡೋಂಗ್ರೆ ಮತ್ತು ಡಾ ಸುಷ್ಮಾ ಡೋಂಗ್ರೆ ದಂಪತಿ ಭಾಗವಹಿಸಿದ್ದರು. ಮಕ್ಕಳಿಗೆ ಸ್ಮರಣ ಶಕ್ತಿ ಸ್ಪರ್ಧೆ ಹಾಗೂ ಪ್ರೇಕ್ಷಕರಿಗೆ ವಿಶೇಷವಾದ ಕರೋಕೆ ಹಾಡು ಗುರುತಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಕೀರ್ತಿಶೇಷ ಡಾ. ಬಿ ಯಶೋವರ್ಮ ಅವರ ಪತ್ನಿ ಸೋನಿಯಾ ವರ್ಮಾ ಉಪಸ್ಥಿತಿಯಲ್ಲಿ ಪೂರಣ್ ವರ್ಮ ಅವರನ್ನು ಪೀತಾಂಬರ ಹೇರಾಜೆ ದಂಪತಿ ಗೌರವಿಸಿದರು. ಈ ಆತಿಥ್ಯ ನೀಡಿದ್ದಕ್ಕಾಗಿ ಪೀತಾಂಬರ ಹೇರಾಜೆ ದಂಪತಿಯನ್ನು ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು.
ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಪೀತಾಂಬರ ಹೇರಾಜೆಯವರು ಮಾತನಾಡಿ, ತಮ್ಮ ಮತ್ತು ರೋಟರಿ ಕುಟುಂಬದ ಸಂಬಂಧ ಮತ್ತು ಪ್ರೀತಿಯನ್ನು ವ್ಯಕ್ತ ಪಡಿಸಿದರು ಮತ್ತು ಅಧ್ಯಕ್ಷ ಡಾ ಪ್ರಕಾಶ ಪ್ರಭುರವರನ್ನು ಸನ್ಮಾನಿಸಿದರು. ಡಾ ಎಂ ಎಂ ದಯಾಕರ್ ಧನ್ಯವಾದ ನೀಡಿದರು.

Related posts

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
error: Content is protected !!