24.3 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

ಬೆಳ್ತಂಗಡಿ: ಪ್ರಸಾರ ಭಾರತಿ ದೂರದರ್ಶನದಲ್ಲಿ ಭರತನಾಟ್ಯವನ್ನು ಪ್ರದರ್ಶನ ನೀಡುವ ನಿಟ್ಟಿನಲ್ಲಿ ಇಳಂತಿಲದ ಕೃತಿ ಕೈಲಾರ್‌ರವರಿಗೆ ‘ಬಿ’ ಗ್ರೇಡ್ ಕಲಾವಿದೆಯಾಗಿ ಮಾನ್ಯತೆ ದೊರಕಿದೆ.

ಇಳಂತಿಲ ನಿವಾಸಿ ಕೈಲಾರ್ ರಾಜಗೋಪಾಲ ಭಟ್ ಮತ್ತು ಸತ್ಯೇಶ್ವರಿ ದಂಪತಿಯ ಪುತ್ರಿಯಾಗಿರುವ ಈಕೆ ಭರತನಾಟ್ಯ ಶಾಸ್ತ್ರ, ಪ್ರವೀಣೆಯಾಗಿದ್ದು, ಹಲವಾರು ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಈಕೆಯ ಭರತಾನಾಟ್ಯ ಪ್ರಾವೀಣ್ಯತೆಯನ್ನು ಕಂಡ ಪ್ರಸಾರ ಭಾರತಿಯ ಆಯ್ಕೆ ಸಮಿತಿಯು ದೂರದರ್ಶನದಲ್ಲಿ ಕಾರ್ಯಕ್ರಮ ನೀಡುವ ನಿಟ್ಟಿನಲ್ಲಿ ‘ಬಿ’ ಗ್ರೇಡ್ ಕಲಾವಿದೆಯಾಗಿ ಇವರನ್ನು ಆಯ್ಕೆ ಮಾಡಿದೆ.

ಪ್ರಸಕ್ತ ಮೈಸೂರಿನ ಜೆ.ಎಸ್.ಎಸ್ ಕಾನೂನು ಕಾಲೇಜಿನ ಅಂತಿಮ ವರ್ಷದ ಬಿ ಬಿ ಎ ಎಲ್ ಎಲ್ ಬಿ. ವಿದ್ಯಾರ್ಥಿನಿಯಾಗಿದ್ದು, ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಹಾಗೂ ವಿದುಷಿ ಸುಹಾಸಿನಿ ಕೌಲಗಿ ರವರ ಮಾರ್ಗದರ್ಶನದಲ್ಲಿ ನೃತ್ಯಾಭ್ಯಾಸವನ್ನು ಮುಂದುವರೆಸುತ್ತಿದ್ದಾರೆ. ಮಾತ್ರವಲ್ಲದೆ ವಿದ್ಯಾನ್ ಡಾ. ಆರ್.ಎಸ್. ನಂದ ಕುಮಾರ್ ರವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾರೆ.

Related posts

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya
error: Content is protected !!