July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

ಬೆಳ್ತಂಗಡಿ: ಪ್ರಸಾರ ಭಾರತಿ ದೂರದರ್ಶನದಲ್ಲಿ ಭರತನಾಟ್ಯವನ್ನು ಪ್ರದರ್ಶನ ನೀಡುವ ನಿಟ್ಟಿನಲ್ಲಿ ಇಳಂತಿಲದ ಕೃತಿ ಕೈಲಾರ್‌ರವರಿಗೆ ‘ಬಿ’ ಗ್ರೇಡ್ ಕಲಾವಿದೆಯಾಗಿ ಮಾನ್ಯತೆ ದೊರಕಿದೆ.

ಇಳಂತಿಲ ನಿವಾಸಿ ಕೈಲಾರ್ ರಾಜಗೋಪಾಲ ಭಟ್ ಮತ್ತು ಸತ್ಯೇಶ್ವರಿ ದಂಪತಿಯ ಪುತ್ರಿಯಾಗಿರುವ ಈಕೆ ಭರತನಾಟ್ಯ ಶಾಸ್ತ್ರ, ಪ್ರವೀಣೆಯಾಗಿದ್ದು, ಹಲವಾರು ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಈಕೆಯ ಭರತಾನಾಟ್ಯ ಪ್ರಾವೀಣ್ಯತೆಯನ್ನು ಕಂಡ ಪ್ರಸಾರ ಭಾರತಿಯ ಆಯ್ಕೆ ಸಮಿತಿಯು ದೂರದರ್ಶನದಲ್ಲಿ ಕಾರ್ಯಕ್ರಮ ನೀಡುವ ನಿಟ್ಟಿನಲ್ಲಿ ‘ಬಿ’ ಗ್ರೇಡ್ ಕಲಾವಿದೆಯಾಗಿ ಇವರನ್ನು ಆಯ್ಕೆ ಮಾಡಿದೆ.

ಪ್ರಸಕ್ತ ಮೈಸೂರಿನ ಜೆ.ಎಸ್.ಎಸ್ ಕಾನೂನು ಕಾಲೇಜಿನ ಅಂತಿಮ ವರ್ಷದ ಬಿ ಬಿ ಎ ಎಲ್ ಎಲ್ ಬಿ. ವಿದ್ಯಾರ್ಥಿನಿಯಾಗಿದ್ದು, ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಹಾಗೂ ವಿದುಷಿ ಸುಹಾಸಿನಿ ಕೌಲಗಿ ರವರ ಮಾರ್ಗದರ್ಶನದಲ್ಲಿ ನೃತ್ಯಾಭ್ಯಾಸವನ್ನು ಮುಂದುವರೆಸುತ್ತಿದ್ದಾರೆ. ಮಾತ್ರವಲ್ಲದೆ ವಿದ್ಯಾನ್ ಡಾ. ಆರ್.ಎಸ್. ನಂದ ಕುಮಾರ್ ರವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾರೆ.

Related posts

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!