September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

ಬೆಳ್ತಂಗಡಿ: ಪ್ರಸಾರ ಭಾರತಿ ದೂರದರ್ಶನದಲ್ಲಿ ಭರತನಾಟ್ಯವನ್ನು ಪ್ರದರ್ಶನ ನೀಡುವ ನಿಟ್ಟಿನಲ್ಲಿ ಇಳಂತಿಲದ ಕೃತಿ ಕೈಲಾರ್‌ರವರಿಗೆ ‘ಬಿ’ ಗ್ರೇಡ್ ಕಲಾವಿದೆಯಾಗಿ ಮಾನ್ಯತೆ ದೊರಕಿದೆ.

ಇಳಂತಿಲ ನಿವಾಸಿ ಕೈಲಾರ್ ರಾಜಗೋಪಾಲ ಭಟ್ ಮತ್ತು ಸತ್ಯೇಶ್ವರಿ ದಂಪತಿಯ ಪುತ್ರಿಯಾಗಿರುವ ಈಕೆ ಭರತನಾಟ್ಯ ಶಾಸ್ತ್ರ, ಪ್ರವೀಣೆಯಾಗಿದ್ದು, ಹಲವಾರು ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಈಕೆಯ ಭರತಾನಾಟ್ಯ ಪ್ರಾವೀಣ್ಯತೆಯನ್ನು ಕಂಡ ಪ್ರಸಾರ ಭಾರತಿಯ ಆಯ್ಕೆ ಸಮಿತಿಯು ದೂರದರ್ಶನದಲ್ಲಿ ಕಾರ್ಯಕ್ರಮ ನೀಡುವ ನಿಟ್ಟಿನಲ್ಲಿ ‘ಬಿ’ ಗ್ರೇಡ್ ಕಲಾವಿದೆಯಾಗಿ ಇವರನ್ನು ಆಯ್ಕೆ ಮಾಡಿದೆ.

ಪ್ರಸಕ್ತ ಮೈಸೂರಿನ ಜೆ.ಎಸ್.ಎಸ್ ಕಾನೂನು ಕಾಲೇಜಿನ ಅಂತಿಮ ವರ್ಷದ ಬಿ ಬಿ ಎ ಎಲ್ ಎಲ್ ಬಿ. ವಿದ್ಯಾರ್ಥಿನಿಯಾಗಿದ್ದು, ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಹಾಗೂ ವಿದುಷಿ ಸುಹಾಸಿನಿ ಕೌಲಗಿ ರವರ ಮಾರ್ಗದರ್ಶನದಲ್ಲಿ ನೃತ್ಯಾಭ್ಯಾಸವನ್ನು ಮುಂದುವರೆಸುತ್ತಿದ್ದಾರೆ. ಮಾತ್ರವಲ್ಲದೆ ವಿದ್ಯಾನ್ ಡಾ. ಆರ್.ಎಸ್. ನಂದ ಕುಮಾರ್ ರವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾರೆ.

Related posts

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya
error: Content is protected !!