24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ : ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇದರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮುದಲಡ್ಕ ಇವರ ಅಧ್ಯಕ್ಷತೆಯಲ್ಲಿ ರತ್ನಾಕರ್ ಭಟ್ ಇವರ ವೇದಾಶ್ರಯ ಮದ್ದಡ್ಕ ನಿವಾಸದಲ್ಲಿ ನಡೆಯಿತು.

ಸಂಘದ ಕಾರ್ಯದರ್ಶಿ ಹರೀಶ್ ಪ್ರಭು ಸ್ವಾಗತಿಸಿದರು, ಕುಮಾರಿ ಸೌಜನ್ಯ ಪ್ರಾರ್ಥನೆ ಮಾಡಿ, ಸಂಘದ ಕೋಶಾಧಿಕಾರಿ ಪ್ರದೀಪ್ ನಾಯಕ್ ಬಾಲ್ಕತ್ಯಾರ್ 2025-26ನೇ ಸಾಲಿನ ಲೆಕ್ಕಪತ್ರ ಮಂಡಿಸಿದರು. ರತ್ನಾಕರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ನಮ್ಮ ವಲಯದ 90% ಗಿಂತಲೂ ಅಧಿಕ ಅಂಕ ಪಡೆದ ಸುಮಾರು 14 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರ ಮುಂದಿನ ಭವಿಷ್ಯಕ್ಕೆ ಶುಭ ಕೋರಲಾಯಿತು.
ಮಾಜಿ ಯೋಧರಾದ ರಾಮಚಂದ್ರ ನಾಯಕ್ ಮುಂಕಾಡಿ ಹಾಗೂ ಯೋಧ ಅಶೋಕ್ ನಾಯಕ್ ಪುಂಜಾಲಕಟ್ಟೆ ಇವರನ್ನು ಸನ್ಮಾನಿಸಲಾಯಿತು.


ಸಂಘದ ಹಿರಿಯ ಕಾರ್ಯಕರ್ತರು ಕೃಷಿಕ ಕೇಶವ ಪ್ರಭು ಗುಂಡಿದಡ್ಡ ಇವರನ್ನು ಗೌರವಿಸಲಾಯಿತು.
ಪೂರ್ಣಾನಂದ ಪ್ರತಿಷ್ಠಾನದ ಅಧ್ಯಕ್ಷ ಮುರಳಿದರ ಪ್ರಭು, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಮಾಲತಿ ಪ್ರಭು , ಪ್ರಭಾಕರ ಭಟ್ ಇಡ್ಯಾ ಶುಭಕೋರಿದರು.
ತಾರಾ ಶಿವರಾಯ ಪ್ರಭು ಧನ್ಯವಾದ ಸಮರ್ಪಿಸಿದರು. ದಿವ್ಯ ಪ್ರದೀಪ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು, ಸಂಘದ ಪದಾಧಿಕಾರಿಗಳು ,ಮಾಜಿ ಅಧ್ಯಕ್ಷರುಗಳು ಭಾಗವಹಿಸಿದ್ದರು.

Related posts

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!