July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

ಬಜಿರೆ: ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ನೂತನ ಶೈಕ್ಷಣಿಕ ವರ್ಷಕ್ಕೆ ಪಾದಾರ್ಪಣೆ ಮಾಡಿದರು. ಪಿ.ಎಂ.ಶ್ರೀ ಬಜಿರೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.1ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು.

ವಿದ್ಯಾರ್ಥಿಗಳನ್ನು ಪಥಸಂಚಲನ ಮೆರವಣಿಗೆಯ ಮೂಲಕ ಆರತಿ ಎತ್ತಿ ಸ್ವಾಗತಿಸಲಾಯಿತು. ಈ ಸಂದರ್ಭ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಅವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಶಾಲೆಗೆ ನೂತನವಾಗಿ ದಾಖಲಾತಿಗೊಂಡ ವಿದ್ಯಾರ್ಥಿಗಳನ್ನು ಪುಷ್ಪವೃಷ್ಠಿಯಿಂದ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

ಬಳಿಕ ಶಾಲೆಯ ಸಭಾಂಗಣದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಜಯಶ್ರೀ ಅಧ್ಯಕ್ಷತೆಯಲ್ಲಿ ಪೋಷಕರ ಸಭೆ ನಡೆಯಿತು. ಮಂಗಳೂರು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಸಭೆಗೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಗೈರುಹಾಜರಾಗದಂತೆ ಪೋಷಕರು ನೋಡಿಕೊಂಡು ವಿದ್ಯಾರ್ಥಿಗಳ ಸ್ವಚ್ಛತೆಗೆ ಗಮನಹರಿಸಿ, ಮೊಬೈಲ್‌ಗಳಿಂದ ಮಕ್ಕಳನ್ನು ದೂರವಿರಿಸಿ, ಟಿವಿಗಳು ಕೇವಲ ನ್ಯೂಸ್ ನೋಡುವುದಕ್ಕೆ ಮಾತ್ರವೇ ಸೀಮಿತವಿರಲಿ ಎಂದರು.


ಎಸ್‌ಡಿಎಂಸಿ ಅಧ್ಯಕ್ಷರಾಗಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಎಸ್‌ಡಿಎಂಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಪಿ. ರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಜಗನ್ನಾಥ ದೇವಾಡಿಗ ಅವರು ಸನ್ಮಾನಪತ್ರ ವಾಚಿಸಿದರು.
ಸರಕಾರದಿಂದ ಒದಗಿಸಲಾದ ಉಚಿತ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಎಸ್‌ಡಿಎಂಸಿ ಅಧಿಕಾರ ಹಸ್ತಾಂತರ ನಡೆಯಿತು. ಇಬ್ಬರು ನೂತನ ಸದಸ್ಯರನ್ನು ಎಸ್‌ಡಿಎಂಗೆ ಆಯ್ಕೆ ಮಾಡಲಾಯಿತು.
ವೇಣೂರು ಗ್ರಾ.ಪಂ. ಸದಸ್ಯರಾದ ಅರುಣ್ ಕ್ರಾಸ್ತ, ಸುನಿಲ್ , ಶಿವಾನಂದ ಗೌಡ, ಎಸ್‌ಡಿಎಂಸಿ ಉಪಾಧ್ಯಕ್ಷ ಲೋಕೇಶ್ ಕೋರ್ಲೋಡಿ, ಎಸ್‌ಡಿಎಂಸಿ ಸದಸ್ಯರು, ತಾಯಂದಿರ ಸಮಿತಿ ಸದಸ್ಯರು, ಪೋಷಕರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


ಪ್ರಭಾರ ಮುಖ್ಯಶಿಕ್ಷಕರಾದ ರಶ್ಮಿ ಶೆಟ್ಟಿ ಸ್ವಾಗತಿಸಿ, ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ ಕಾಳಜಿ ಬಗ್ಗೆ ಹಾಗೂ ಶಾಲೆಯ ಕೆಲವು ನಿಯಮಗಳ ಬಗ್ಗೆ ತಿಳಿಸಿದರು. ಶಿಕ್ಷಕಿಯರಾದ ನಾಗವೇಣಿ ಮತ್ತು ಹರ್ಷಲಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಬಾಲಕ್ಕ ವಂದಿಸಿದರು. ವಿದ್ಯಾರ್ಥಿಗಳಾದ ಸ್ಪಂದನಾ ಬಳಗ ಪ್ರಾರ್ಥಿಸಿದರು.

Related posts

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
error: Content is protected !!