July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

ಬೆಳ್ತಂಗಡಿ; ಕಾಜೂರಿನ ಅಭಿವೃದ್ಧಿ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಸಮುದಾಯದ ಏಳಿಗೆಯ ಕನಸನ್ನು ಹೊತ್ತು ವಿದೇಶದಲ್ಲಿ ದುಡಿಯುತ್ತಿರುವ ಅನಿವಾಸಿ ಯುವ ಮಿತ್ರರ ತಂಡವಾದ ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ಇದರ ನೂತನ ಸಾಲಿನ ಆಡಳಿತ ಮಂಡಳಿ ರಚನೆಯು ಇತ್ತೀಚೆಗೆ ಜರುಗಿತು.

ಸ್ವಂತ ಕುಟುಂಬ, ಉದ್ಯೋಗ ಮತ್ತು ಪ್ರವಾಸಿ ಜೀವನದ ಜವಾಬ್ದಾರಿಗಳ ನಡುವೆ ಬಿಡುವಿನ ಸಮಯವನ್ನು ಸಮಾಜದ ಅಭಿವೃದ್ಧಿಗಾಗಿ ಮೀಸಲಿಟ್ಟು, ಊರಿನ ಒಳಿತಿಗಾಗಿ ವಿವಿಧ ಯೋಜನೆಗಳು ಹಾಗೂ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಿಸ್ವಾರ್ಥ ಸೇವಾ ಮನೋಭಾವದೊಂದಿಗೆ ಊರಿನ ಬಗ್ಗೆ ಕಾಳಜಿ, ಸಮಾಜದ ಬಗ್ಗೆ ಬದ್ಧತೆ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ನಿರ್ಮಿಸುವ ಸಂಕಲ್ಪದೊಂದಿಗೆ‌ ಈ ಸಮಿತಿ ಕಾರ್ಯನಿರ್ವಹಿಸುತ್ತದೆ.

ಸಯ್ಯಿದ್ ಕಾಜೂರು ತಂಙಳ್ ಮಾರ್ಗದರ್ಶನದಲ್ಲಿ ಮುನ್ನಡೆಯುವ ಕೆಡಿಸಿ ಸಮಿತಿಯ ಮಹಾಸಭೆಯು ನಡೆದು ಮುಂದಿನ ಸಾಲಿನ ಕಾರ್ಯಕಾರಿ ಸಮಿತಿ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಶರೀಫ್ ಜೆ.ಹೆಚ್ ಕಾಜೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ವಹಾಬ್ ಅಝ್ಹರಿ, ಕೋಶಾಧಿಕಾರಿಯಾಗಿ ಸಿದ್ದೀಕ್ ಪಿ.ಎ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿಕಂದರ್ ಹೇಡ್ಯಾ, ಜಾಬಿರ್ ಕಾಜೂರು, ಲತೀಫ್ ಪಿ.ಎ, ಮನ್ಸೂರ್ ಡಿ.ಹೆಚ್, ಸುಹೈಬ್ ಕಾಜೂರು, ನವಾಝ್ ಕಾಜೂರು, ಮುಹಮ್ಮದ್ ಹಾಶಿಂ ಕಾಜೂರು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಹನೀಫ್ ಕೆ ಎಂ, ಇಬ್ರಾಹಿಂ ಇಬ್ಬಿ, ಹಾರಿಸ್ ಜೆ.ಹೆಚ್, ಇಸ್ಮಾಯಿಲ್ ಹಾಜಿ ಮಕ್ಕ, ಸಿನಾನ್ ಬಹ್ರೈನ್, ಫಾರೂಕ್ ಜೆ.ಹೆಚ್, ರಫೀಕ್ ಕಾಜೂರು, ಸಫ್ವಾನ್ ಇವರನ್ನು ಆರಿಸಲಾಯಿತು.
ಸಯ್ಯಿದ್ ಕಾಜೂರು ತಂಙಳ್ ಗೌರವಾಧ್ಯಕ್ಷರಾಗಿಯೂ, ಕೆ ಯು ಮುಹಮ್ಮದ್ ಸಖಾಫಿ ಅವರು ಡೈರೆಕ್ಟರಾಗಿ ಎಂದಿನಂತೆ ಮಹಾಸಭೆಯಲ್ಲಿ ಅವಿರೋಧವಾಗಿ ನೇಮಕಗೊಂಡಿದ್ದಾರೆ.

Related posts

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya
error: Content is protected !!