ಗೇರುಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾಗಿ ಮೇ 31ಕ್ಕೆ ವಯೋನಿವೃತ್ತಿಗೊಂಡ ಈಶ್ವರಿ ಕೆ ಅವರ ಬೀಳ್ಕೊಡುಗೆ ಸಮಾರಂಭವು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು .
ಈಶ್ವರಿ ಕೆ ಇವರು ತಮ್ಮ ವೃತ್ತಿಜೀವನದ ಅನುಭವ ಮತ್ತು ಹಾಗೂ ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸಿದರು.
ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ್ಞ , ಸಹಕಾರ ಭಾರತಿಯ ತಾಲೂಕು ಮಾಜಿ ಅಧ್ಯಕ್ಷ ರಾಜೇಶ್ ಪೆರ್ಮುಡ, . ನಾಳ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೇಶವ ಪೂಜಾರಿ ಉಪಸ್ಥಿತರಿದ್ದು ನಿವೃತ್ತರನ್ನು ಗೌರವಿಸಿದರು . ಕಳಿಯ ಗ್ರಾಮ ಪಂಚಾಯತ್ , ಪದವಿಪೂರ್ವ ಕಾಲೇಜು ಹಾಗೂ ಅಕ್ಷರ ದಾಸೋಹದ ಸಿಬ್ಬಂದಿಗಳು ನೆನಪಿನ ಕಾಣಿಕೆಯನ್ನು ನೀಡಿದರು.
ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಹಮ್ಮದ್ ರಿಯಾಜ್ ನೇತೃತ್ವದಲ್ಲಿ ಸಹ ಶಿಕ್ಷಕರ ಸಂಘ ಬೆಳ್ತಂಗಡಿ ಇದರ ತಾಲೂಕು ಘಟಕದ ವತಿಯಿಂದ ನಿವೃತ್ತರನ್ನು ಸನ್ಮಾನಿಸಲಾಯಿತು .
ಜ್ಯೋತಿ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಸನ್ಮಾನ ಪತ್ರ ವಾಚಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿ ರಮ್ಯಾ ವಂದಿಸಿದರು.












