24.2 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾಗಿ ಮೇ 31ಕ್ಕೆ ವಯೋನಿವೃತ್ತಿಗೊಂಡ ಈಶ್ವರಿ ಕೆ ಅವರ ಬೀಳ್ಕೊಡುಗೆ ಸಮಾರಂಭವು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು .

ಈಶ್ವರಿ ಕೆ ಇವರು ತಮ್ಮ ವೃತ್ತಿಜೀವನದ ಅನುಭವ ಮತ್ತು ಹಾಗೂ ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸಿದರು.

ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ್ಞ , ಸಹಕಾರ ಭಾರತಿಯ ತಾಲೂಕು ಮಾಜಿ ಅಧ್ಯಕ್ಷ ರಾಜೇಶ್ ಪೆರ್ಮುಡ, . ನಾಳ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೇಶವ ಪೂಜಾರಿ ಉಪಸ್ಥಿತರಿದ್ದು ನಿವೃತ್ತರನ್ನು ಗೌರವಿಸಿದರು . ಕಳಿಯ ಗ್ರಾಮ ಪಂಚಾಯತ್ , ಪದವಿಪೂರ್ವ ಕಾಲೇಜು ಹಾಗೂ ಅಕ್ಷರ ದಾಸೋಹದ ಸಿಬ್ಬಂದಿಗಳು ನೆನಪಿನ ಕಾಣಿಕೆಯನ್ನು ನೀಡಿದರು.

ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಹಮ್ಮದ್ ರಿಯಾಜ್ ನೇತೃತ್ವದಲ್ಲಿ ಸಹ ಶಿಕ್ಷಕರ ಸಂಘ ಬೆಳ್ತಂಗಡಿ ಇದರ ತಾಲೂಕು ಘಟಕದ ವತಿಯಿಂದ ನಿವೃತ್ತರನ್ನು ಸನ್ಮಾನಿಸಲಾಯಿತು .

ಜ್ಯೋತಿ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಸನ್ಮಾನ ಪತ್ರ ವಾಚಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿ ರಮ್ಯಾ ವಂದಿಸಿದರು.

Related posts

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya
error: Content is protected !!