July 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂ‌ನ್ 1 ರಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್(32) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ಪೆರ್ನೆ ನಿವಾಸಿ ನಿತಿನ್‌ (34) ಎಂಬವರ ದೂರಿನಂತೆ, ಜೂನ್1ರಂದು ಬೆಳಿಗ್ಗೆ, ಪಿರ್ಯಾದಿದಾರರಿಗೆ ವಾಟ್ಸಾಪ್‌ ಮೂಲಕ ಬೆಳ್ತಂಗಡಿ ಗುರುವಾಯನಕೆರೆ, ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಮೃತದೇಹ ಇರುವ ಬಗ್ಗೆ ಭಾವಚಿತ್ರ ಸಹಿತ ಮಾಹಿತಿ ಬಂದಿದ್ದು, ಸದ್ರಿ ಬಾವಚಿತ್ರವನ್ನು ಪರಿಶೀಲಿಸಿದಾಗ ಮೃತವ್ಯಕ್ತಿಯು ತನ್ನ ಸಹೋದರ ಯತೀಶ (33) ಎಂಬವರಾಗಿರುತ್ತಾರೆ. ಪಿರ್ಯಾದಿದಾರರು ಘಟನಾಸ್ಥಳಕ್ಕೆ ಬಂದು ಸ್ಥಳದಲ್ಲಿರುವ ಸಿಸಿಟಿವಿಯನ್ನು ಪರಿಶೀಲಿಸಿದಾಗ, ತನ್ನ ಸಹೋದರನಿಗೆ ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿ ನಿವಾಸಿ ಇಬ್ರಾಹಿಂ (54) ಎಂಬವರುಗಳು ಹಲ್ಲೆ ಮಾಡುತ್ತಿರುವುದು ಕಂಡುಬಂದಿದ್ದು, ಆರೋಪಿಗಳ ಹಲ್ಲೆಯಿಂದಾಗಿ ಸದ್ರಿ ಯತೀಶನು ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ : 65/2026, ಕಲಂ: 115(2) 103 ಜೊತೆಗೆ 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Related posts

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya
error: Content is protected !!