September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

ಬೆಳ್ತಂಗಡಿ: ಪ್ರಸಾರ ಭಾರತಿ ದೂರದರ್ಶನದಲ್ಲಿ ಭರತನಾಟ್ಯವನ್ನು ಪ್ರದರ್ಶನ ನೀಡುವ ನಿಟ್ಟಿನಲ್ಲಿ ಇಳಂತಿಲದ ಕೃತಿ ಕೈಲಾರ್‌ರವರಿಗೆ ‘ಬಿ’ ಗ್ರೇಡ್ ಕಲಾವಿದೆಯಾಗಿ ಮಾನ್ಯತೆ ದೊರಕಿದೆ.

ಇಳಂತಿಲ ನಿವಾಸಿ ಕೈಲಾರ್ ರಾಜಗೋಪಾಲ ಭಟ್ ಮತ್ತು ಸತ್ಯೇಶ್ವರಿ ದಂಪತಿಯ ಪುತ್ರಿಯಾಗಿರುವ ಈಕೆ ಭರತನಾಟ್ಯ ಶಾಸ್ತ್ರ, ಪ್ರವೀಣೆಯಾಗಿದ್ದು, ಹಲವಾರು ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಈಕೆಯ ಭರತಾನಾಟ್ಯ ಪ್ರಾವೀಣ್ಯತೆಯನ್ನು ಕಂಡ ಪ್ರಸಾರ ಭಾರತಿಯ ಆಯ್ಕೆ ಸಮಿತಿಯು ದೂರದರ್ಶನದಲ್ಲಿ ಕಾರ್ಯಕ್ರಮ ನೀಡುವ ನಿಟ್ಟಿನಲ್ಲಿ ‘ಬಿ’ ಗ್ರೇಡ್ ಕಲಾವಿದೆಯಾಗಿ ಇವರನ್ನು ಆಯ್ಕೆ ಮಾಡಿದೆ.

ಪ್ರಸಕ್ತ ಮೈಸೂರಿನ ಜೆ.ಎಸ್.ಎಸ್ ಕಾನೂನು ಕಾಲೇಜಿನ ಅಂತಿಮ ವರ್ಷದ ಬಿ ಬಿ ಎ ಎಲ್ ಎಲ್ ಬಿ. ವಿದ್ಯಾರ್ಥಿನಿಯಾಗಿದ್ದು, ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಹಾಗೂ ವಿದುಷಿ ಸುಹಾಸಿನಿ ಕೌಲಗಿ ರವರ ಮಾರ್ಗದರ್ಶನದಲ್ಲಿ ನೃತ್ಯಾಭ್ಯಾಸವನ್ನು ಮುಂದುವರೆಸುತ್ತಿದ್ದಾರೆ. ಮಾತ್ರವಲ್ಲದೆ ವಿದ್ಯಾನ್ ಡಾ. ಆರ್.ಎಸ್. ನಂದ ಕುಮಾರ್ ರವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾರೆ.

Related posts

ಅನಾರೋಗ್ಯದಿಂದ ದಿವಾಕರ ಕುಲಾಲ್ ನಿಧನ

Suddi Udaya

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!