24.1 C
ಪುತ್ತೂರು, ಬೆಳ್ತಂಗಡಿ
September 2, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

ಬೆಳ್ತಂಗಡಿ: ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಮೇ 31ರಂದು ರಾತ್ರಿ ಸಂಭವಿಸಿದೆ.

ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ನಿವಾಸಿ ಮಧುಸೂಧನ ( 38) ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಕೊಲೆಗೈದ ಆರೋಪಿಯಾಗಿದ್ದಾನೆ.

ಘಟನೆಯ ವಿವರ: ಕೇಶವ ಪೂಜಾರಿ ಅವರ ಮನೆಯಲ್ಲಿ ರವಿವಾರ ರಾತ್ರಿ ದೈವಕ್ಕೆ ತಂಬಿಲ ಕಾರ್ಯಕ್ರಮ ನಡೆಯುತ್ತಿತ್ತು. ರಾಹುಲ್ ಮತ್ತಿತರರು ಮನೆಯಿಂದ ಹೊರಗೆ ಕುಡಿದು ಗದ್ದಲ ಮಾಡುತ್ತಿದ್ದರು. ಇದನ್ನು ಆಕ್ಷೇಪಿಸಿದ ಮಧುಸೂದನ್ ಅವರನ್ನು ರಾಹುಲ್ ಕೋಪದಿಂದ ಬಿಯರ್ ಬಾಟಲ್ ನಿಂದ ಕುತ್ತಿಗೆಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಮಧುಸೂದನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.
ಮೃತರು ಅವಿವಾಹಿತರಾಗಿದ್ದು, ಇಲೆಕ್ನಿಷಿಯನ್ ವೃತ್ತಿ ಮಾಡುತ್ತಿದ್ದರು. ರಾಹುಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಪುಂಜಾಲಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!