ಬೆಳ್ತಂಗಡಿ: ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯ ಸಮಾನ ಪ್ರಾತಿನಿಧ್ಯ ಹಾಗೂ ಹಿಂದುಳಿದ ವರ್ಗಗಳ ರಾಜಕೀಯ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸ್ವಚ್ಛ ಚಾರಿತ್ರ್ಯದ ಹಿರಿಯ ನಾಯಕರು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ರನ್ನು ಹಿಂದುಳಿದ ಕೋಟಾದಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ವತಿಯಿಂದ ಅಗ್ರಹಿಸಲಾಗಿದೆ.

ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಲ್ಲವರು ಬಹು ಸಂಖ್ಯಾತರಾಗಿದ್ದು, ಈ ಭಾಗದಲ್ಲಿ ಮೂರ್ತೆದಾರಿಕೆಯನ್ನು ಮಾಡುತ್ತಿದ್ದು ಈ ವೃತ್ತಿಯು ಅತೀ ಕಷ್ಟದ ಕೆಲಸವಾಗಿರುವುದರಿಂದ ಹಾಗೂ ಸರಕಾರದಿಂದ ಈ ಮೂರ್ತೆದಾರಿಕೆಗೆ ಯಾವುದೆ ಸವಲತ್ತುಗಳು ದೊರೆತ್ತಿರುವುದಿಲ್ಲ. ಮೂರ್ತೆದಾರಿಕೆ ವೃತ್ತಿ ಮಾಡುತ್ತಿರುವವರ ಸಂಖ್ಯೆಯು ಕ್ಷೀಣಿಸುತ್ತಿದೆ. ಹಾಗೂ ಶೇಂದಿಯಿಂದ ತಯಾರಾಗುವ ಬಹು ಔಷದೀಯ ಗುಣವುಳ್ಳ ತಾಳೆಬೆಲ್ಲದ ತಯಾರಿಕೆಯು ಕಡಿಮೆಯಾಗುತ್ತಿದೆ. ಹಾಗೂ ಬಿಲ್ಲವ ಸಮಾಜಕ್ಕೆ ಸರಿಯಾಗಿ ಯಾವುದೇ ಸರಕಾರದಿಂದ ಪ್ರಾತಿನಿಧ್ಯ ದೊರಕಿರುವುದಿಲ್ಲ. ಆದುದರಿಂದ ಬಿಲ್ಲವ ಸಮುದಾಯದ ನಾಯಕರಾದ ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಬಿ ಕೆ ಹರಿಪ್ರಸಾದ್ರವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಹಾಗೂ ಸಮಾಜದ ಎಲ್ಲಾ ವರ್ಗಗಳ ಧ್ವನಿಯಾಗಿ ಕಾಯನಿರ್ವಹಿಸಿದ್ದಾರೆ. ಆದುದರಿಂದ ರಾಜ್ಯದ ಮುಖಂಡರು ಹಾಗೂ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ರಾಜಕೀಯ ಪರಿಸ್ಥಿತಿ ಸಾಮಾಜಿಕ ಸಮಿಕರಣಗಳು, ಹಾಗೂ ಹಿಂದುಳಿದ ವರ್ಗಗಳ ಅಶೋತ್ತರಗಳು ಹಾಗೂ ಬಿ ಕೆ ಹರಿಪ್ರಸಾದ್ರವರು ದೀರ್ಘಕಾಲದ ಸೇವೆಯನ್ನು ಪರಿಗಣಿಸಿ ಅವರನ್ನು ಹಿಂದುಳಿದ ಕೋಟಾದಡಿಯಲ್ಲಿ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡುವ ಮೂಲಕ ಸೂಕ್ತ ಗೌರವ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದಿಂದ ಒತ್ತಾಯಿಸಲಾಗಿದೆ ಎಂದು ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ತಿಳಿಸಿದ್ದಾರೆ.












