ಬೆಳ್ತಂಗಡಿ: ಉತ್ತರ ಪ್ರದೇಶದ ಲಕ್ನೋದಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜಿ ಮಹಾರಾಜ್ ಅವರನ್ನು ಭೇಟಿಯಾಗಿ ತಮ್ಮ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ, ಅಯೋಧ್ಯೆ ಶಾಖಾ ಮಠದ ನಿರ್ಮಾಣ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕ್ಷೇತ್ರದ ಶಿಷ್ಯ ವರ್ಗ, ಅಯೋಧ್ಯೆಯ ಸ್ವಾಮಿಗಳ ಶಿಷ್ಯ ವರ್ಗ ಉಪಸ್ಥಿತರಿದ್ದರು.












