September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

ಬೆಳ್ತಂಗಡಿ; ಕಾಜೂರಿನ ಅಭಿವೃದ್ಧಿ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಸಮುದಾಯದ ಏಳಿಗೆಯ ಕನಸನ್ನು ಹೊತ್ತು ವಿದೇಶದಲ್ಲಿ ದುಡಿಯುತ್ತಿರುವ ಅನಿವಾಸಿ ಯುವ ಮಿತ್ರರ ತಂಡವಾದ ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ಇದರ ನೂತನ ಸಾಲಿನ ಆಡಳಿತ ಮಂಡಳಿ ರಚನೆಯು ಇತ್ತೀಚೆಗೆ ಜರುಗಿತು.

ಸ್ವಂತ ಕುಟುಂಬ, ಉದ್ಯೋಗ ಮತ್ತು ಪ್ರವಾಸಿ ಜೀವನದ ಜವಾಬ್ದಾರಿಗಳ ನಡುವೆ ಬಿಡುವಿನ ಸಮಯವನ್ನು ಸಮಾಜದ ಅಭಿವೃದ್ಧಿಗಾಗಿ ಮೀಸಲಿಟ್ಟು, ಊರಿನ ಒಳಿತಿಗಾಗಿ ವಿವಿಧ ಯೋಜನೆಗಳು ಹಾಗೂ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಿಸ್ವಾರ್ಥ ಸೇವಾ ಮನೋಭಾವದೊಂದಿಗೆ ಊರಿನ ಬಗ್ಗೆ ಕಾಳಜಿ, ಸಮಾಜದ ಬಗ್ಗೆ ಬದ್ಧತೆ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ನಿರ್ಮಿಸುವ ಸಂಕಲ್ಪದೊಂದಿಗೆ‌ ಈ ಸಮಿತಿ ಕಾರ್ಯನಿರ್ವಹಿಸುತ್ತದೆ.

ಸಯ್ಯಿದ್ ಕಾಜೂರು ತಂಙಳ್ ಮಾರ್ಗದರ್ಶನದಲ್ಲಿ ಮುನ್ನಡೆಯುವ ಕೆಡಿಸಿ ಸಮಿತಿಯ ಮಹಾಸಭೆಯು ನಡೆದು ಮುಂದಿನ ಸಾಲಿನ ಕಾರ್ಯಕಾರಿ ಸಮಿತಿ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಶರೀಫ್ ಜೆ.ಹೆಚ್ ಕಾಜೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ವಹಾಬ್ ಅಝ್ಹರಿ, ಕೋಶಾಧಿಕಾರಿಯಾಗಿ ಸಿದ್ದೀಕ್ ಪಿ.ಎ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿಕಂದರ್ ಹೇಡ್ಯಾ, ಜಾಬಿರ್ ಕಾಜೂರು, ಲತೀಫ್ ಪಿ.ಎ, ಮನ್ಸೂರ್ ಡಿ.ಹೆಚ್, ಸುಹೈಬ್ ಕಾಜೂರು, ನವಾಝ್ ಕಾಜೂರು, ಮುಹಮ್ಮದ್ ಹಾಶಿಂ ಕಾಜೂರು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಹನೀಫ್ ಕೆ ಎಂ, ಇಬ್ರಾಹಿಂ ಇಬ್ಬಿ, ಹಾರಿಸ್ ಜೆ.ಹೆಚ್, ಇಸ್ಮಾಯಿಲ್ ಹಾಜಿ ಮಕ್ಕ, ಸಿನಾನ್ ಬಹ್ರೈನ್, ಫಾರೂಕ್ ಜೆ.ಹೆಚ್, ರಫೀಕ್ ಕಾಜೂರು, ಸಫ್ವಾನ್ ಇವರನ್ನು ಆರಿಸಲಾಯಿತು.
ಸಯ್ಯಿದ್ ಕಾಜೂರು ತಂಙಳ್ ಗೌರವಾಧ್ಯಕ್ಷರಾಗಿಯೂ, ಕೆ ಯು ಮುಹಮ್ಮದ್ ಸಖಾಫಿ ಅವರು ಡೈರೆಕ್ಟರಾಗಿ ಎಂದಿನಂತೆ ಮಹಾಸಭೆಯಲ್ಲಿ ಅವಿರೋಧವಾಗಿ ನೇಮಕಗೊಂಡಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಟೀಚರ್ಸ್ ಬ್ಯಾಂಕ್ ಉಡುಪಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!