July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾಗಿ ಮೇ 31ಕ್ಕೆ ವಯೋನಿವೃತ್ತಿಗೊಂಡ ಈಶ್ವರಿ ಕೆ ಅವರ ಬೀಳ್ಕೊಡುಗೆ ಸಮಾರಂಭವು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು .

ಈಶ್ವರಿ ಕೆ ಇವರು ತಮ್ಮ ವೃತ್ತಿಜೀವನದ ಅನುಭವ ಮತ್ತು ಹಾಗೂ ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸಿದರು.

ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ್ಞ , ಸಹಕಾರ ಭಾರತಿಯ ತಾಲೂಕು ಮಾಜಿ ಅಧ್ಯಕ್ಷ ರಾಜೇಶ್ ಪೆರ್ಮುಡ, . ನಾಳ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೇಶವ ಪೂಜಾರಿ ಉಪಸ್ಥಿತರಿದ್ದು ನಿವೃತ್ತರನ್ನು ಗೌರವಿಸಿದರು . ಕಳಿಯ ಗ್ರಾಮ ಪಂಚಾಯತ್ , ಪದವಿಪೂರ್ವ ಕಾಲೇಜು ಹಾಗೂ ಅಕ್ಷರ ದಾಸೋಹದ ಸಿಬ್ಬಂದಿಗಳು ನೆನಪಿನ ಕಾಣಿಕೆಯನ್ನು ನೀಡಿದರು.

ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಹಮ್ಮದ್ ರಿಯಾಜ್ ನೇತೃತ್ವದಲ್ಲಿ ಸಹ ಶಿಕ್ಷಕರ ಸಂಘ ಬೆಳ್ತಂಗಡಿ ಇದರ ತಾಲೂಕು ಘಟಕದ ವತಿಯಿಂದ ನಿವೃತ್ತರನ್ನು ಸನ್ಮಾನಿಸಲಾಯಿತು .

ಜ್ಯೋತಿ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಸನ್ಮಾನ ಪತ್ರ ವಾಚಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿ ರಮ್ಯಾ ವಂದಿಸಿದರು.

Related posts

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya
error: Content is protected !!