July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೀತಾಂಬರ ಹೇರಾಜೆಯವರ ಮನೆಯಲ್ಲಿ ರೋಟರಿ ಕ್ಲಬ್ ಕುಟುಂಬೋತ್ಸವ

ಬೆಳ್ತಂಗಡಿ ರೋಟರಿ ಕ್ಲಬ್ ನ ಮಾಜಿ ಸದಸ್ಯ ನಿವೃತ್ತ ಎಸ್ ಪಿ ಪೀತಾಂಬರ್ ಹೇರಾಜೆಯವರು ಬೆಳ್ತಂಗಡಿ ರೋಟರಿ ಕ್ಲಬ್ಬಿನ ಕುಟುಂಬದ ಸರ್ವ ಸದಸ್ಯರನ್ನೂ ತಮ್ಮ ಮನೆಗೆ ಆಹ್ವಾನಿಸಿ ಕುಟುಂಬೋತ್ಸವ ನಡೆಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಒಂದು ವಿಶೇಷವಾದ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿ ಕೊಂಡಿತ್ತು. ಇದರ ನಿರ್ವಹಣೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಡಾ ಪ್ರಕಾಶ ಪ್ರಭು, ಪತ್ನಿ ಗೀತಾ ಪ್ರಕಾಶ ಪ್ರಭು ಹಾಗೂ ಕಾರ್ಯದರ್ಶಿ ಡಾ ಎಂ ದಯಾಕರರು ಮಾಡಿದರು. ಈ ಮನರಂಜನಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಪ್ರತಾಪ ಸಿಂಹ ನಾಯಕ್ ಮತ್ತು ಜ್ಯೋತಿ ನಾಯಕ್ ದಂಪತಿಗಳು , ಡಾ ರಮೇಶ್ ಮತ್ತು ಡಾ. ಹೇಮಲತಾ ದಂಪತಿ, ಡಾ ಶ್ರೀಕೃಷ್ಣ ಮತ್ತು ಸುಮಂಗಲ ದಂಪತಿ, ಡಾ ಶಶಿಧರ ಡೋಂಗ್ರೆ ಮತ್ತು ಡಾ ಸುಷ್ಮಾ ಡೋಂಗ್ರೆ ದಂಪತಿ ಭಾಗವಹಿಸಿದ್ದರು. ಮಕ್ಕಳಿಗೆ ಸ್ಮರಣ ಶಕ್ತಿ ಸ್ಪರ್ಧೆ ಹಾಗೂ ಪ್ರೇಕ್ಷಕರಿಗೆ ವಿಶೇಷವಾದ ಕರೋಕೆ ಹಾಡು ಗುರುತಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಕೀರ್ತಿಶೇಷ ಡಾ. ಬಿ ಯಶೋವರ್ಮ ಅವರ ಪತ್ನಿ ಸೋನಿಯಾ ವರ್ಮಾ ಉಪಸ್ಥಿತಿಯಲ್ಲಿ ಪೂರಣ್ ವರ್ಮ ಅವರನ್ನು ಪೀತಾಂಬರ ಹೇರಾಜೆ ದಂಪತಿ ಗೌರವಿಸಿದರು. ಈ ಆತಿಥ್ಯ ನೀಡಿದ್ದಕ್ಕಾಗಿ ಪೀತಾಂಬರ ಹೇರಾಜೆ ದಂಪತಿಯನ್ನು ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು.
ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಪೀತಾಂಬರ ಹೇರಾಜೆಯವರು ಮಾತನಾಡಿ, ತಮ್ಮ ಮತ್ತು ರೋಟರಿ ಕುಟುಂಬದ ಸಂಬಂಧ ಮತ್ತು ಪ್ರೀತಿಯನ್ನು ವ್ಯಕ್ತ ಪಡಿಸಿದರು ಮತ್ತು ಅಧ್ಯಕ್ಷ ಡಾ ಪ್ರಕಾಶ ಪ್ರಭುರವರನ್ನು ಸನ್ಮಾನಿಸಿದರು. ಡಾ ಎಂ ಎಂ ದಯಾಕರ್ ಧನ್ಯವಾದ ನೀಡಿದರು.

Related posts

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!